ಅಡಿಕೆ

ಅಡಿಕೆ ಬೆಳೆಗಾರರಿಗೆ ಅಭಯ – ಕರಿಮೆಣಸು ಬೆಳೆಗಾರರಿಗೆ ಭಯ

ಅಡಿಕೆ ಆಮದು ಆದ ತಕ್ಷಣ ಮಾರುಕಟ್ಟೆಯಲ್ಲಿ ಒಂದು ಸಂಚಲನ ಉಂಟಾಯಿತು. ದರ ಕುಸಿಯಲಾರಂಭಿಸಿತು. ಅಡಿಕೆ ಬೆಳೆಗಾರರು ಇನ್ನೇನು ಮಾರುಕಟ್ಟೆ ಭಾರೀ ಕುಸಿಯಲಿದೆ ಎಂಬ ಆತಂಕಕ್ಕೆ ಒಳಗಾದರು. ಖಾಸಗಿ ಮಾರುಕಟ್ಟೆಯಲ್ಲಿ ದರ ಭಾರೀ ಕುಸಿತ ಉಂಟಾಗಿತ್ತು. ಆ ಸಮಯದಲ್ಲಿ ಬೆಳೆಗಾರರು ಕಟ್ಟಿದ ಅಡಿಕೆ ಮಾರುಕಟ್ಟೆ ಸಹಕಾರಿ ಸಂಸ್ಥೆ ಕ್ಯಾಂಪ್ಕೋ  ಸಂಸ್ಥೆಯ ಪರವಾಗಿ ಅಧ್ಯಕ್ಷರು ಬೆಳೆಗಾರರು ಅಂಜಬೇಕಾಗಿಲ್ಲ ಇದು ತಾತ್ಕಾಲಿಕ ಕುಸಿತ, ಎಲ್ಲಾ ಹಿಂದಿನಂತೆ ಆಗುತ್ತದೆ ಎಂಬ ಅಭಯ ನೀಡಿದ್ದಾರೆ. ಅದೇ ಸಂಸ್ಥೆ ವ್ಯವಹರಿಸುವ ಕರಿಮೆಣಸು ಆಮದು ಬಗ್ಗೆ ಯಾವ…

Read more
ಚಾಲಿ ಅಸ್ಥಿರ

ಅಡಿಕೆ ಮಾರುಕಟ್ಟೆಯ ಸ್ಥಿತಿ- ಕೆಂಪಡಿಕೆ ಅಬಾಧಿತ- ಚಾಲಿ ಅಸ್ಥಿರ.

ಕೆಂಪಡಿಕೆ ಮಾರುಕಟ್ಟೆಯಲ್ಲಿ ದೊಡ್ದ ಸಂಚಲನ ಇಲ್ಲ. ಆದರೆ ಚಾಲಿ ಮಾತ್ರ ಬಹಳ ಅಸ್ಥಿರತೆಯಲ್ಲಿ ಮುನ್ನಡೆಯುತ್ತಿದೆ. ಖಾಸಗಿಯವರ ದರ ಸಾಂಸ್ಥಿಕ ಮಾರುಕಟ್ಟೆಗಿಂತ ಕಡಿಮೆಯಾಗಿದೆ. ಸಾಂಸ್ಥಿಕ ಮಾರುಕಟ್ಟೆಯಲ್ಲಿ  ಪ್ರಕಟಣೆಯ ದರಕ್ಕೂ ಖರೀದಿ ದರಕ್ಕೂ  ತುಂಬಾ ವ್ಯತ್ಯಾಸ ಇದೆ. ಗುಣಮಟ್ಟಕ್ಕೆ ಹೆಚ್ಚಿನ ಪ್ರಾತಿನಿಧ್ಯ ಬಂದಿದೆ. ಗುಣಮಟ್ಟದ ಅಡಿಕೆಗೆ ಮಾತ್ರ  ಗರಿಷ್ಟ ದರ ಇದೆ. ಖಾಸಗಿಯವರ ನಿರುತ್ಸಾಹ ಚಾಲಿ ಅಡಿಕೆ ಮಾರುಕಟ್ಟೆಯನ್ನು ತಾತ್ಕಾಲಿಕವಾಗಿ ಸ್ವಲ್ಪ ಹಿಂದೆ ಬರುವಂತೆ ಮಾಡುತ್ತದೆಯೋ ಎಂಬ ಅನುಮಾನ ಉಂಟಾಗಿದೆ. ವಿದೇಶಗಳಿಂದ ಸರಕಾರದ ಅನುಮತಿಯ ಮೇರೆಗೆ ಅಡಿಕೆ ಆಮದಾಗುತ್ತಿದೆ ಎಂಬ…

Read more
'ಪೂರ್ವ ಶಿಷ್ಟ ಪದ್ದತಿ'ಗಳನ್ನು ಪಾಲಿಸಿದ ಕೃಷಿ

ಮರೆಯಾಗುತ್ತಿದೆ ಕೃಷಿ ಕ್ಷೇತ್ರದ ‘ಪೂರ್ವ ಶಿಷ್ಟ ಪದ್ದತಿ’ಗಳು.

ಪೂರ್ವ ಶಿಷ್ಟ ಪದ್ದತಿ (Customs and Usages) ಎಂದರೆ ಹಿಂದಿನಿಂದಲೂ ನಡೆದುಕೊಂಡು ಬಂದಿರುವ ವ್ಯವಸ್ಥೆ. ಇದು  ಕಾನೂನಾತ್ಮಕವಾಗಿಲ್ಲದಿದ್ದರೂ ಇದನ್ನು ಕಾನೂನು ರಕ್ಷಕರು ಅಥವಾ ನ್ಯಾಯಾಲಯ ತಳ್ಳಿ ಹಾಕುವಂತಿಲ್ಲ. ಪೂರ್ವ ಪದ್ದತಿಗಳನ್ನು ಮೀರಿ ಕಾನೂನು ಅಲ್ಲ ಎಂಬುದನ್ನು ಸರ್ವೋಚ್ಚ ನ್ಯಾಯಾಯಲವೂ ಒಪ್ಪಿಕೊಳ್ಳುತ್ತದೆ. ಇವು ಬ್ರಿಟೀಷ್ ಸರಕಾರ ವ್ಯವಸ್ಥೆಯಲ್ಲಿ ಗವರ್ನರ್ ಜನರಲ್ ಗಳು ಕೊಡುತ್ತಿದ್ದ ತೀರ್ಮಾನ. ಇದು ಎಲ್ಲರೂ ಒಪ್ಪಿರುವ ನ್ಯಾಯಸಮ್ಮತವಾದ ಪದ್ದತಿ. ಅನಾದಿ ಕಾಲದಿಂದಲೂ ಇದು ಚಾಲ್ತಿಯಲ್ಲಿತ್ತು. ಇದನ್ನು ಪ್ರತೀಯೊಬ್ಬ ಕೃಷಿಕನೂ ಅನುಸರಿಸಿದ್ದೇ ಆದರೆ ಪರಸ್ಪರ ಜಗಳ, ತಕರಾರು…

Read more
ಕೆಂಪಡಿಕೆ ಚೇತರಿಕೆ ಪ್ರಾರಂಭವಾಗಿದೆ.

ಕೆಂಪಡಿಕೆ ಚೇತರಿಕೆ ಪ್ರಾರಂಭವಾಗಿದೆ- ಚಾಲಿಗೆ ಮುಹೂರ್ತ ಕೂಡಿಲ್ಲ. ರಾಶಿ 50,000 ದಾಟಿದೆ.

ಕೆಂಪಡಿಕೆ ರಾಶಿಗೆ ಶಿರಸಿಯಲ್ಲಿ, ಹೊಸನಗರದಲ್ಲಿ ಇಂದು ಕ್ವಿಂಟಾಲಿಗೆ 50,000 ದಾಟಿದೆ. ಯಲ್ಲಾಪುರದಲ್ಲಿ 54,000 ದಾಟಿದೆ. ಇನ್ನೇನು ಕೆಲವೇ ವಾರಗಳಲ್ಲಿ ಇನ್ನೂ ಚೇತರಿಕೆ ಆಗುವ ಸಂಭವ ಇದೆ ಎನ್ನುತ್ತಾರೆ ಶಿವಮೊಗ್ಗದ ವರ್ತಕರೊಬ್ಬರು. ಚಾಲಿ ದರ ಮಾತ್ರ ಏರಿಲ್ಲ. ಆದರೆ ಮಾರುಕಟ್ಟೆಗೆ ಅಡಿಕೆ ಬಾರದ ಕಾರಣ ಏನಾಗುತ್ತದೆ ವ್ಯಾಪಾರಿ ತಂತ್ರ ಎಂಬುದನ್ನು ಕಾದು ನೋಡಬೇಕಾಗಿದೆ. ಚಾಲಿಗೂ ಬೇಡಿಕೆ ಇದೆ. ಕೆಂಪಡಿಕೆಗೂ ಬೇಡಿಕೆ ಇದೆ. ಆದರೆ ದರ ಏರಿಕೆಗೆ ಸೂಕ್ತ ಮುಹೂರ್ತ ಕೂಡಿ ಬರಬೇಕು. ಬಹಳ ಜನ ಈ ವರ್ಷ ಅಡಿಕೆಗೆ…

Read more
ಅಡಿಕೆ ಮಾರುಕಟ್ಟೆ ಸ್ಥಿರ

ಅಡಿಕೆ ಮಾರುಕಟ್ಟೆ ಸ್ಥಿರ : ಕುಸಿಯುವ ಭೀತಿ ಇಲ್ಲ.

ಎಪ್ರೀಲ್ ತಿಂಗಳಲ್ಲಿ ಅಡಿಕೆ ಮಾರುಕಟ್ಟೆ ಸ್ವಲ್ಪ ಚೇತರಿಕೆ ಆಗಬಹುದು ಎಂಬ ಊಹನೆ ಇತ್ತು. ಊಹನೆಯಂತೆ ಹಳೆ ಚಾಲಿ ಮತ್ತು ಪಟೋರಾ ಅಡಿಕೆ ದರ ಸ್ವಲ್ಪ ಏರಿತಾದರೂ ಹೊಸ ಅಡಿಕೆ ದರ ಸ್ಥಿರವಾಗಿಮುಂದುವರಿದಿದೆ. ಅಡಿಕೆ ಉತ್ಪಾದನೆ ಜಾಸ್ತಿ ಇದೆ ಎಂಬ ಮಾಹಿತಿಗಳ ನಡುವೆ, ದರ ಕುಸಿಯುವ ಭೀತಿ ಇಲ್ಲ ಎಂಬುದಾಗಿ ವರ್ತಕರ ಹೇಳಿಕೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ಧಾರಣೆ ಸ್ವಲ್ಪ ಏರಿಕೆಯಲ್ಲೇ ಇದೆ. ಕಳೆದ ವರ್ಷದಷ್ಟು ಇಳಿಕೆಯ ಅಂಜಿಕೆಯೂ ಇಲ್ಲ. ಒಟ್ಟಿನಲ್ಲಿ ಅಡಿಕೆ ಆಮದು ಆಗುವ…

Read more
areca palm

ಮಳೆ ಬಂತೆಂದು ಚಿಂತೆ ಮಾಡಬೇಡಿ. ಇದರಿಂದ ಬೆಳೆ ನಷ್ಟ ಆಗದು.

ಈಗ ಮಳೆ ಬಂದು ಅಡಿಕೆಯಲ್ಲಿ ಮುಂದಿನ ಫಸಲು ಕಡಿಮೆಯಾಗಿ ನಷ್ಟ ಆಗಬಹುದು ಎಂದು ಆತಂಕದಲ್ಲಿರುವ ಬೆಳೆಗಾರರಿಗೆ ಇದು ಕಿವಿ ಮಾತು.ಬೆಳೆ ನಷ್ಟ ಆಗದು. ಅನುಕೂಲವೇ ಆಗುವುದು. ಎಪ್ರೀಲ್ ತಿಂಗಳಲ್ಲಿ ಮಳೆ ಬರುವುದು ಇತ್ತೀಚಿನ ದಿನಗಳಲ್ಲಿ ಅಪರೂಪವಾದರೂ ಹಿಂದೆ ಬಹುತೇಕ ವಿಶೇಷ ದಿನಗಳ ಸಂದರ್ಭದಲ್ಲಿ ಮಳೆ ಆಗುತ್ತಿತ್ತು. ಕಳೆದ ವರ್ಷ ಇದಕ್ಕಿಂತಲೂ ಬೇಗ ಮಳೆ  ಬಂದಿದೆ. ಆದರೆ  ಫಸಲಿಗೆ ತೊಂದರೆ ಆಗಿರಲಿಲ್ಲ.  ಈ ವರ್ಷ ಎಪ್ರೀಲ್ ನಲ್ಲಿ ಮಳೆ ಧಾರಾಕಾರವಾಗಿ ಬಂದಿದೆ. ತಾಪಮಾನ  ತುಂಬಾ ಇಳಿಕೆಯಾಗಿದೆ. ಇಂತಹ ವಾತಾವರಣದಿಂದ…

Read more
ಹಳ್ಳಿಯ ಮನೆಗಳಲ್ಲಿ ರಾಶಿ ರಾಶಿ ದುಂಬಿ

ಹಳ್ಳಿಯ ಮನೆಗಳಿಗೆಲ್ಲಾ ನುಗ್ಗಿದೆ- ‘ಕೆಲ್ಲು’ ಎಂಬ ಈ ಅನಾಹುತಕಾರಿ ದುಂಬಿ.

ಹಳ್ಳಿಗಳಲ್ಲಿ, ಹಳ್ಳಿಗೆ ತಾಗಿದ ಪಟ್ಟಣಗಳಲ್ಲಿ ಈಗ ಬೆಳಕಿನ ದೀಪವನ್ನು ಹುಡುಕಿ ಬರುವ ಹಿಂಡು ಹಿಂಡು ದುಂಬಿಗಳು (ಕೆಲ್ಲು) ಜನರಲ್ಲಿ ಆತಂಕವನ್ನು ಉಂಟು ಮಾಡಿದೆ. ಕೆಲವು ಜನ ಇದು ಯಾವುದೋ ಮಾರಿ. ದೆವ್ವದ ಉಪಟಳ ಎಂದು ಮಾತಾಡುತ್ತಿದ್ದಾರೆ. ವಾಸ್ತವವಾಗಿ ಇದು ನಾವೇ ಮಾಡಿಕೊಂಡ ಆವಾಂತರ. ಬಹುತೇಕ ಎಲ್ಲಾ ಮನೆಗಳಲ್ಲೂ ಇದು ಇದೆ. ರಸ್ತೆ ಸಂಚರಿಸುವಾಗ ಮೈಗೆ ತಾಗಿ ಮನೆ ಮನೆಗೆ ಪ್ರಸಾರವಾಗುತ್ತಿದೆ.ಮನೆಯ ಕಿಟಕಿ ಬಾಗಿಲು ಸಂದು, ಬಟ್ಟೆ ಬರೆ, ಪುಸ್ತಕಗಳು, ಹಂಚಿನ ಛಾವಣಿಯ ರೀಪು ಪಕ್ಕಾಸುಗಳಲ್ಲಿ, ಗೊಡೆ ಸಂದುಗಳಲ್ಲಿ,…

Read more
ಅಡಿಕೆಗೆ ಸಿಂಪರಣೆ

ಅಡಿಕೆಗೆ ಬಳಸುತ್ತಿರುವ ಕೀಟ- ಶಿಲೀಂದ್ರ ನಾಶಕ ಕೆಲಸ ಮಾಡುವುದಿಲ್ಲವಂತೆ. 

ಭಾರತ ಸರಕಾರದ ಕೃಷಿ ಮಂತ್ರಾಲಯವು ಕೆಲವು ಕೀಟನಾಶಕಗಳನ್ನು ಬ್ಯಾನ್ ಮಾಡುವ ಬಗ್ಗೆ ಪ್ರಸ್ತಾಪ ಎತ್ತಿದೆ. ಕಾರಣ ಅವು ಕೆಲಸ ಮಾಡುವುದಿಲ್ಲವಂತೆ. ಸುಮಾರು 27 ಬೆಳೆಸಂರಕ್ಷಗಳನ್ನು ಬ್ಯಾನ್ ಮಾಡಲು ಮುಂದಾಗಿದೆ. ಹೌದು ನಾವು ಅಡಿಕೆ ಮಿಳ್ಳೆ ಉದುರದಂತೆ ತಡೆಯಲು ಬಳಸುವ ಕೆಲವು ಕೀಟನಾಶಕ, ಶಿಲೀಂದ್ರ ನಾಶಕಗಳೂ ಸೇರಿದಂತೆ  ಬಹಳಷ್ಟು ಕೃಷಿ ಒಳಸುರಿಗಳು ಬಳಸಿಯೂ  ಕೆಲಸ ಮಾಡದೆ ನಮ್ಮ ಜೇಬು ಖಾಲಿ ಮಾಡಿದ್ದಷ್ಟೇ. ಅದೆಷ್ಟೋ ರೈತರು ಬೆಳೆಗಳಿಗೆ ಬರುವ ರೋಗಕ್ಕೆ, ಕೀಟಕ್ಕೆ ಔಷಧಿ ಸಿಂಪಡಿಸುತ್ತಾರೆ. ಒಂದನ್ನು ಸಿಂಪಡಿಸಿ ಫಲಿತಾಂಶ ಸಿಗದಿದ್ದರೆ…

Read more
ಅಡಿಕೆ

ವರ್ಷಾಂತ್ಯದಲ್ಲೂ ಸ್ಥಿರತೆ ಉಳಿಸಿಕೊಂಡ ಅಡಿಕೆ ಧಾರಣೆ- ಮುಂದೆ ಇದೆ ಚಾನ್ಸ್.

ಸಾಮಾನ್ಯವಾಗಿ ಮಾರ್ಚ್ ವರ್ಷಾಂತ್ಯದಲ್ಲಿ ದರ ಇಳಿಕೆ ಸಾಮಾನ್ಯ. ಆದರೆ ಈ ವರ್ಷ ಹಾಗೆ ಆಗದೆ ಸ್ಥಿರತೆ ಕಾಯ್ದುಕೊಳ್ಳಲಾಗಿದೆ. ಹಾಗಾಗಿ ಮುಂದಿನ ತಿಂಗಳಲ್ಲಿ ಚಾಲಿ- ಕೆಂಪಡಿಕೆ ಎರಡೂ ಏರಿಕೆ ಆಗಲಿದೆ. ಅಡಿಕೆ ಮಾರುಕಟ್ಟೆಯಲ್ಲಿ ಏರಿಕೆಯ ಸೂಚನೆ ದರ ಸ್ಥಿರತೆಯಲ್ಲಿ ಗಮನಿಸಬಹುದು.  ಚಾಲಿ ಎರಡು ತಿಂಗಳಿಂದ ಸ್ಥಿರವಾಗಿತ್ತು. ಈಗ  ಸಾಗರ, ಹೊಸನಗರ, ಇಲ್ಲೆಲ್ಲಾ ಸಿಪ್ಪೆ ಗೋಟಿಗೆ ಬೇಡಿಕೆ ಬರಲಾರಂಭಿಸಿದೆ. ಶಿರಸಿ, ಸಿದ್ದಾಪುರ, ಯಲ್ಲಾಪುರದಲ್ಲಿ ಚಾಲಿ ದರ ಏರಿಕೆ ಪ್ರರಾಂಭವಾಗಿದೆ. ಸಿಪ್ಪೆ ಗೋಟು ದರ ಏರಿಕೆ ಚಾಲಿಗೆ ಬೇಡಿಕೆಯ ಸೂಚನೆಯಾಗಿದ್ದು, ಚಾಲಿ…

Read more
ಅಡಿಕೆ

ಅಡಿಕೆ ಧಾರಣೆ ಏನಾಗಬಹುದು? ಯಾಕೆ ಏನೂ ಸಂಚಲನ ಇಲ್ಲ ?

ಅಡಿಕೆ ಧಾರಣೆ ಕಳೆದ ಎರಡು ತಿಂಗಳಿಂದ ನಿಂತ ನೀರಿನ ತರಹ ಮುಂದುವರಿದಿದೆ. ಯಾವ ಏರಿಕೆಯೂ ಇಲ್ಲ. ಇಳಿಕೆಯೂ ಇಲ್ಲ. ಕರಾವಳಿಯ ಅಡಿಕೆ ಬೆಳೆಗಾರರು ಅಡಿಕೆ ಕೊಡುವುದನ್ನು ಕಡಿಮೆಮಾಡಿದ್ದಾರೆ. ಕೆಂಪಡಿಕೆ ಮಾಡುವ ಕಡೆಯೂ ಜನ ದರ ಏರಿಕೆಗೆ ಕಾಯುತ್ತಿದ್ದಾರೆ. ಮಾರುಕಟ್ಟೆಗೆ ಬರುವ ಅಡಿಕೆ ಪೂರ್ತಿ ಚೇಣಿ ಮಾಡಿದವರ ಕಮಿಟ್ಮೆಂಟ್ ಹಾಗೂ ಮುಂದಿನ ಚೇಣಿ ವಹಿಸಿಕೊಳ್ಳುವುದಕ್ಕೇ ಬೇಕಾದ  ಫಂಡ್ ಕ್ರೋಡೀಕರಣಕ್ಕೆ ಎಂಬ ಸುದ್ದಿಗಳಿವೆ. ಇಷ್ಟಕ್ಕೂ ಮುಂದೆ ಅಡಿಕೆ ಧಾರಣೆ ಏನಾಗಬಹುದು, ಏನಾದರೂ ಸಂಚಲನ ಉಂಟಾಗಬಹುದೇ ಎಂಬ ಕುತೂಹಲ ಎಲ್ಲರದ್ದೂ. ಅಡಿಕೆ…

Read more
error: Content is protected !!