farmer selling pumpkins

ಮುಂದಿನ ಹಂಗಾಮಿಗೆ ಬೆಳೆ ಯೋಜನೆ ಬದಲಾಯಿಸಿಕೊಳ್ಳಿ.

ರೈತರೇ ಮುಂದಿನ ವರ್ಷದ ಪರಿಸ್ಥಿತಿ ತುಂಬಾ ಅನಿಶ್ಚಿತವಾಗಿದ್ದು, ಕೆಲವು ಆಯ್ದ ಬೆಳೆಗಳನ್ನು ದೊಡ್ಡ ಪ್ರಮಾಣದಲ್ಲಿ ಬೆಳೆಯಬೇಕೇ ಬೇಡವೇ ಎಂದು ಎರಡೆರಡು ಬಾರಿ ಯೋಚಿಸಿ ಮುನ್ನಡೆಯಿರಿ. ಒಂದೆಡೆ ಕೊರೋನಾ ಮಹಾಮಾರಿ ಮನುಕುಲವನ್ನು ಅಟ್ಟಾಡಿಸುವಂತೆ ಕಾಣಿಸುತ್ತದೆ. ಇದು ಕಳೆದ ವರ್ಷಕ್ಕೆ ಮುಗಿಯಲಿಲ್ಲ, ಈ ವರ್ಷವೂ ವಕ್ಕರಿಸಿದೆ. ಇದು ಬೇಗ ಮುಗಿಯುವಂತೆ ಕಂಡು ಬರುವುದಿಲ್ಲಅ ಮುಂದೆ ಏನು ಎಂದು ಪ್ರಶ್ಣೆಯಾಗಿಯೇ ಇದೆ. ಹವಾಮಾನ ಸಹ ತನ್ನ ಮಾಮೂಲು ಚಕ್ರವನ್ನು ಬದಲಿಸಿದಂತಿದೆ. ಮುಂಗಾರು ಸಹ ಕೈಕೊಡಬಹುದೇನೋ ಅನ್ನಿಸುತ್ತಿದೆ. ಪೆಟ್ರೋಲ್ –ಡೀಸೆಲ್ ಬೆಲೆ ಗಗನಕ್ಕೇರಿದೆ.ಸರಕಾರವೂ…

Read more

ಕಡ್ಡಾಯವಾಗಿ ತೆರಿಗೆ ಪಾವತಿಸುವ ಏಕೈಕ ನಾಗರೀಕರು -ರೈತರು

ಎಲ್ಲರ ದೃಷಿಯಲ್ಲಿ ರೈತರು  ಸರಕಾರದ ಸವಲತ್ತು ಪಡೆಯುವವರು ಎಂದು ಗುರುತಿಸಲ್ಪಟ್ಟವರು. ಆದರೆ ವಾಸ್ತವ ಇವರು ಟ್ಯಾಕ್ಸ್ ಕಟ್ಟುವವರು. ಸಮಾಜ ರೈತ ಎಂದರೆ ಸರಕಾರದ ಕಡಿಮೆ ಬಡ್ಡಿ ದರದ ಸಾಲಪಡೆಯುವವ. ಕೇಂದ್ರ ಸರಕಾರದ ಬಳುವಳಿಯಾದ ಕಿಸಾನ್ ಸಮ್ಮಾನ್ ಯೋಜನೆಯ ಹಣ ಪಡೆಯುವವ. ಸಬ್ಸಿಡಿ, ಸವಲತ್ತು  ಪಡೆಯುವ. ಎಂದು ತಿಳಿದಿದ್ದಾರೆ. ವಾಸ್ತವವಾಗಿ ಸರಕಾರ ಇವರಿಗೆ ಕೊಡುವುದೇನಿದ್ದರೂ ಕಿತ್ತುಕೊಂಡದ್ದರ 10%  ಮಾತ್ರ.  ರೈತ ಎಂದರೆ ಸರಕಾರವನ್ನು ಸಾಕುವವ. ದೇಶದ ಆರ್ಥಿಕತೆಗೆ ರೈತನ ಕೊಡುಗೆ ಸಣ್ಣದಲ್ಲ. ಇದನ್ನು ಎಲ್ಲರಿಗೂ ತಿಳಿಸಿ. ರೈತನನ್ನು ಮೊದಲ…

Read more

ಅಡಿಕೆ ಬೆಳೆಗಾರರೇ ನೀವು ಇದನ್ನು ಒಪ್ಪುತ್ತೀರಾ?

ಒಬ್ಬ ವೈದ್ಯನ ಮಗ ವೈದ್ಯನಾದರೆ ಅವನ ವೃತ್ತಿ ಕ್ಷಮತೆಯಲ್ಲಿ ಇರುವ ಹಿಡಿತ ಬೇರೆಯವರಲ್ಲಿ ಬರಲು ಸ್ವಲ್ಪ ಕಷ್ಟವಾಗುತ್ತದೆ. ಇದನ್ನು ನೀವು ಗಮನಿಸಿರಬಹುದು.ಇದು ಬರೇ ವೈದ್ಯ ವೃತ್ತಿಗೆ ಮಾತ್ರವಲ್ಲ ಎಲ್ಲಾ ವೃತ್ತಿ ಕ್ಷೇತ್ರಕ್ಕೂ ಹುಟ್ಟು ಸಹಜವಾದ ಅನುಭವ ಅರ್ಜಿತ ಅನುಭವಕ್ಕಿಂತ ಮಿಗಿಲಾಗಿರುತ್ತದೆ. ಅಡಿಕೆ ಬೆಳೆಗೆ ಸಲಹೆ ಕೊಡುವವರು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದಾರೆ. ಅಡಿಕೆ ಬೆಳೆಯನ್ನು ಹುಟ್ಟಿನಿಂದ ಕಂಡವರಿಗಿಂತ ಹೆಚ್ಚಿನ ಜ್ಞಾನವನ್ನು ಇವರು ಸಂಪಾದಿಸಿದವರಂತೆ ವರ್ತಿಸುತ್ತಾರೆ. ಬೆಳೆ ಬಗ್ಗೆ ಉಪದೇಶ ಮಾಡುತ್ತಾರೆ. ಒಂದು ಬದಿಯಲ್ಲಿ ಅವರ ಈ ಎಲ್ಲಾ ಸೇವೆಯ…

Read more
ಅಡಿಕೆ -ಹಳದಿ ಎಲೆ ರೋಗ ಪರಿಹಾರದ ನಿರೀಕ್ಷೆ ಬೇಡ

ಅಡಿಕೆ -ಹಳದಿ ಎಲೆ ರೋಗ ಪರಿಹಾರದ ನಿರೀಕ್ಷೆ ಬೇಡ.

ಅಡಿಕೆ ಬೆಳೆಗೆ ಬಾಧಿಸಲ್ಪಟ್ಟ ಹಳದಿ ಎಲೆ ರೋಗ ಈಗಿನ ಪರಿಸ್ಥಿತಿಯಲ್ಲಿ ಇನ್ನು ನೂರು ವರ್ಷ ಕಳೆದರೂ ನಿವಾರಣೆ ಅಗುವುದಿಲ್ಲ, ಯಾಕೆ ಕೇಳಿ. ಅಡಿಕೆ ಬೆಳೆಯಲಾಗುವ ಕರ್ನಾಟಕದ ಮಲೆನಾಡಿನ ಭಾಗಗಳಾದ ಶ್ರಿಂಗೇರಿ, ಕೊಪ್ಪ, ಬಾಳೆಹೊನ್ನೂರು, ಕಳಸ ಮುಂತಾದ ಕಡೆ ಎಲೆ ಹಳದಿಯಾಗುವ ಸಮಸ್ಯೆ ಪ್ರಾರಂಭವಾಗಿ ಸುಮಾರು 40 ವರ್ಷಗಳಾಗಿರಬಹುದು.  ಎಲೆ ಹಳದಿಯಾಗುವುದಕ್ಕೆ ಒಂದು ರೋಗ ಎಂದು ನಾಮಕರಣ ಮಾಡಲಾಗಿದೆ. ಪೈಟೋ ಪ್ಲಾಸ್ಮಾ ತರಹದ ಜೀವಾಣು ಇದಕ್ಕೆ ಕಾರಣ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಜೊತೆಗೆ ಜಗತ್ತಿನಲ್ಲಿ ಈ ಜೀವಾಣುವನ್ನು ನಿಯಂತ್ರಿಸಬಲ್ಲ…

Read more

ಪ್ರಗತಿಪರ ಕೃಷಿಕ- ಹರಿಶ್ಚಂದ್ರ ಶೆಟ್ಟಿಯವರು ನಮ್ಮನ್ನು ಅಗಲಿದ್ದಾರೆ.

ಪುತ್ತೂರು ತಾಲೂಕು ಇಚಿಲಂಪಾಡಿಯಲ್ಲಿ ಹಲವಾರು ವರ್ಷಗಳಿಂದ ಕೃಷಿ ಮಾಡುತ್ತಿದ್ದು, ಆಧುನಿಕ ಚಿಂತನೆಯ ಕೃಷಿ ಮೂಲಕ ಹೆಸರು ಮಾಡಿದ್ದ ಹಿರಿಯ ಕೃಷಿಕ, ಹರಿಶ್ಚಂದ್ರ ಶೆಟ್ಟಿ ಇವರು ನಮ್ಮನ್ನು ಅಗಲಿದ್ದಾರೆ. ಕೃಷಿ ವೃತ್ತಿಯನ್ನು  ಲಾಭದಾಯಕವಾಗಿ  ಹೇಗೆ ಮುನ್ನಡೆಸಬಹುದು ಎಂಬುದಕ್ಕೆ ಮಾದರಿಯಾಗಿದ್ದ ಶ್ರೀಯುತರು ತಮ್ಮ ಕೃಷಿ ಭೂಮಿಯಲ್ಲಿ ವೈವಿದ್ಯಮಯ ಬೆಳೆಗಳನ್ನು ಬೆಳೆಯುವ ಮೂಲಕ ಕೃಷಿಯ ಆದಾಯವನ್ನು  ಹೆಚ್ಚಿಸಿಕೊಂಡು ಎಲ್ಲರಿಗೂ ಮಾದರಿಯಾಗಿದ್ದವರು. ಇವರು ಕೈಯಾಡಿಸದ ಕೃಷಿಯೇ ಇಲ್ಲ. ಜನೋಪಾಕಾರಿಯಾಗಿದ್ದವರು, ಎಲ್ಲರಿಗೂ ಮಾರ್ಗದರ್ಶಕರಾಗಿದ್ದ ಇವರು ಅಲ್ಪ ಕಾಲದ ಅನಾರೋಗ್ಯದಿಂದ ಇಂದು ಬೆಳಗ್ಗೆ (23-03-2021 ಮಂಗಳವಾರ) …

Read more
ಕಾಡು ಹಣ್ಣು ತಿನ್ನುತ್ತಿರುವ ಗುಬ್ಬಿ

ಗುಬ್ಬಿಗಳ ನಾಶಕ್ಕೆ ಟವರ್ ಮಾತ್ರ ಕಾರಣವಲ್ಲ.

ಗುಬ್ಬಿಗಳ ಸಂಖ್ಯೆ ಕಡಿಮೆಯಾಗಲು ಒಂದು ಕಾರಣ ಮೊಬೈಲ್ ಟವರ್ ಎನ್ನಲಾಗುತ್ತದೆ. ಆದರೆ ಮೊಬೈಲ್ ಟವರ್ ಬರುವ ಮುಂಚೆಯೇ ಇವು ಕಡಿಮೆಯಾಗಲಾರಂಭಿಸಿವೆ ಗೊತ್ತೇ? ಗುಬ್ಬಿಗಳ ನಾಶಕ್ಕೆ ಮೊಬೈಲ್ ಟವರ್ ಒಂದೇ ಕಾರಣ ಅಲ್ಲ. ನಮ್ಮ ಕೃಷಿ ಚಟುವಟಿಕೆ ಮತ್ತು ಹವಾಮಾನಗಳೂ ಒಂದು ಕಾರಣ. ಗುಬ್ಬಿಗಳು ಹಿಂದೆ ನಾವು ಸಣ್ಣವರಿದ್ದಾಗ ಮನೆಯ ಮಾಡಿನ ಸಂದುಗಳಲ್ಲಿ , ಚಾವಡಿಯ  ಆಡ್ದದ ಎಡೆಯಲ್ಲಿ ಗೂಡು ಕಟ್ಟಿ ಕುಳಿತುಕೊಳ್ಳುತ್ತಿತ್ತು. ಅದು ತನ್ನಷ್ಟಕ್ಕೇ ಅಲ್ಲಿಗೆ ಬಂದು ವಾಸ್ತವ್ಯ ಮಾಡುವುದು ವಾಡಿಕೆ. ಗುಬ್ಬಿಗಳು ಮನೆಯ ಮಕ್ಕಳಂತೆ ಆಗಿದ್ದವು.  ಅದು…

Read more

ಬೆಳೆಗಾರರೇ – ಮೈಲುತುತ್ತೆ ಖರೀದಿಸುವಾಗ ಬುದ್ದಿವಂತರಾಗಿರಿ.

ಇನ್ನೇನೋ ಮಳೆಗಾಲ ಬರಲಿದೆ. ಅಡಿಕೆಗೆ ಭಾರೀ ಬೆಲೆ ಬಂದಿದೆ. ಅಡಿಕೆ ಬೆಳೆಗಾರರಲ್ಲಿ ದುಡ್ಡು ಇದೆ. ಅದರಲ್ಲಿ ತಮ್ಮ ಹೆಚ್ಚಳವಾಗುತ್ತದೆ. ಈಗಲೇ ಖರೀದಿ ಮಾಡಿ ಎಂದು ವ್ಯಾಪಾರಿಗಳು ಹಳೆ ಸ್ಟಾಕು ಮುಗಿಸಿ ಮುಂದಿನ ಹೊಸ ಸ್ಟಾಕು ಮಾಡಲು ಬಂಡವಾಳ ಕ್ರೋಢೀಕರಣದಲ್ಲಿದ್ದಾರೆ. ಅಡಿಕೆ ಬೆಳೆಗಾರರೇ ನೀವು ಈಗ ಬುದ್ದಿವಂತರಾಗುವುದು ಅಗತ್ಯವಾಗಿದೆ. ಅಡಿಕೆ ಕೊಳೆ ರೋಗಕ್ಕೆ ಮೈಲುತುತ್ತೆ ಬೇಕು. ಹಾಗೆಂದು ಖರೀದಿಸಿದರೆ ದರ ಕಡಿಮೆ, ಮುಂದೆ ಹೆಚ್ಚು. ಇದೆಲ್ಲಾ ಯಾವ ಕ್ರಮವೋ ತಿಳಿಯದು. ಸರಕಾರದ ಸಂಬಂಧಿಸಿದ ಇಲಾಖೆ ಇದನ್ನೆಲ್ಲಾ ಗಮನಿಸಿದೆಯೋ ಇಲ್ಲವೋ…

Read more

ಹಿರಿಯ ಕೃಷಿ ವಿಜ್ಞಾನಿ ಪದ್ಮಭೂಷಣ ಡಾ. ಎಂ. ಮಹದೇವಪ್ಪ ನಮ್ಮನ್ನಗಲಿದ್ದಾರೆ.

ಅಂತರ ರಾಷ್ಟ್ರೀಯ ಖ್ಯಾತಿಯ ಕನ್ನಡ ನಾಡಿನ ಹಿರಿಯ ಕೃಷಿ ವಿಜ್ಞಾನಿ ಡಾ. ಎಂ. ಮಹದೇವಪ್ಪನವರು ಕೃಷಿ ಕ್ಷೇತ್ರಕ್ಕೆ ಕೊಟ್ಟ ಕೊಡುಗೆ ಅನನ್ಯ. ಕಳೆದ 60 ವರ್ಷಗಳಿಂದ ಕೃಷಿ ಕ್ಷೇತ್ರಕ್ಕೆ ತನ್ನ ಜೀವನವನ್ನು ಮುಡುಪಾಗಿಟ್ಟ ನಮ್ಮೆಲ್ಲರ ಗುರುಗಳು ಆಗಿದ್ದ ಡಾ. ಮಹಾದೇವಪ್ಪ ಇಂದು ನಮ್ಮನ್ನಗಲಿದರು. ನಾವು ಉಣ್ಣುವ ಅನ್ನದ ಜೊತೆಗೆ ಅವರ ಹೆಸರು ಇದೆ ಎಂಬುದು ಎಲ್ಲಾ ಕೃಷಿಕರಿಗೂ ತಿಳಿದಿರಬೇಕು. ಮೈಸೂರಿನವರಾದ  ಮಾದಾಪುರ ಮಹದೇವಪ್ಪ ಇವರು ಓರ್ವ ತಳಿ ವಿಜ್ಞಾನಿ.Genetics and Plant breeder ಇವರನ್ನು ಅನ್ನದ ವಿಜ್ಞಾನಿ…

Read more

ನಮ್ಮ ಕೃಷಿ ವ್ಯವಸ್ಥೆಯಲ್ಲಿ ಮಹಾನ್ ಸಂಚಲನ ಇದರಿಂದ ಮಾತ್ರ ಸಾಧ್ಯ.

ತಜ್ಞರು ಕ್ಷೇತ್ರ  ಜ್ಞಾನ ಇಲ್ಲದೆ ಏನೋನೋ ಸುಧಾರಣೆಗಳನ್ನು ಸರಕಾರಕ್ಕೆ ಶಿಫಾರಸು ಮಾಡುತ್ತಾರೆ. ಇದು ಕೃಷಿಕರ ಬದುಕನ್ನು ಉತ್ತಮಪಡಿವುದು ಅಷ್ಟಕ್ಕಷ್ಟೇ. ನಿಜವಾಗಿ ಮೂಲಭೂತ ಅಗತ್ಯ ಬೇರೆಯೇ ಇದೆ. ಭಾರತ ದೇಶದ ರೈತ ತನ್ನ ಜೀವಮಾನದಲ್ಲಿ  ನೆಮ್ಮದಿಯ ಜೀವನವನ್ನು ಕಳೆಯುವುದು ಬರೇ ಮಕ್ಕಳಾಟಿಕೆಯ ವಯಸ್ಸಿನಲ್ಲಿ ಮಾತ್ರ. ಜವಾಬ್ಧಾರಿ ಬಂದ ನಂತರ ತನ್ನ ಕೊನೇ ಉಸಿರಿನ ತನಕವೂ ರೈತ ನೆಮ್ಮದಿಯ ಜೀವನ ನಡೆಸಲಾರ. ಒಂದಿಲ್ಲೊಂದು ತಲೆಬಿಸಿಯಲ್ಲೇ (Tension)ಅವನು ಅಲ್ಪಾಯುಷಿಯಾಗಿ ಅಂತ್ಯವನ್ನು ಕಾಣುತ್ತಾನೆ. ವ್ಯಕ್ತಿಯೊಬ್ಬನಿಗೆ ಬದುಕುವ ಹಕ್ಕು ಇರುವಾಗ ನೆಮ್ಮದಿಯ ಬದುಕಿಗೆ ಬೇಕಾಗುವ…

Read more
Organic University

ಕರ್ನಾಟಕದಲ್ಲಿ ಸಾವಯವ ಕೃಷಿಗಾಗಿ ವಿಶ್ವ ವಿಧ್ಯಾನಿಲಯ!

ಮಾನ್ಯ ಕೃಷಿ ಮಂತ್ರಿಗಳು ಸಾವಯವ ಕೃಷಿ ಸಂಶೋಧನೆಗಾಗಿ ಒಂದು ವಿಶ್ವ ವಿಧ್ಯಾನಿಲಯವನ್ನು ಸ್ಥಾಪಿಸಬೇಕು ಎಂಬ ಚಿಂತನೆ ನಡೆಸಿದ್ದಾರೆ. ಸುಮಾರು 10 ವರ್ಷಕ್ಕೆ ಹಿಂದೆ ನಮ್ಮ ರಾಜ್ಯದಲ್ಲಿ ಎರಡು ಕೃಷಿ ವಿಶ್ವ ವಿಧ್ಯಾನಿಲಯಗಳಿದ್ದವು. ಮತ್ತೊಂದು ಕೃಷಿ ವಿಶ್ವ ವಿಧ್ಯಾನಿಲಯ ಸೇರ್ಪಡೆಯಾಯಿತು. ತೋಟಗಾರಿಕಾ ವಿಶ್ವ ವಿಧ್ಯಾನಿಲಯವಾಯಿತು. ಪಶು ಸಂಗೋಪನಾ ವಿಶ್ವ ವಿಧ್ಯಾನಿಲಯ, ತೋಟಗಾರಿಕೆ ಮತ್ತು  ಕೃಷಿ ಜಂಟಿ ವಿಶ್ವ ವಿಧ್ಯಾನಿಲಯಗಳಾಯಿತು. ಇನ್ನು  ಉಳಿದದ್ದು ಸಾವಯವ ಕೃಷಿ ಒಂದೇ ಏನೋ ಎಂಬುದು ಮಾನ್ಯ ಕೃಷಿ ಸಚಿವರ ಇಂಗಿತದಲ್ಲಿ ಕಾಣುತ್ತದೆ. ಹಾಲೀ ಇರುವ…

Read more
error: Content is protected !!