PM Narendra modi

ರೈತರ ಕಲ್ಯಾಣಕ್ಕೆ ಕೇಂದ್ರ ಸರಕಾರದ “ಕೃಷಿ ಸುಧಾರಣಾ ಬಿಲ್”

ದೇಶದ ರೈತರ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಮಾರುಕಟ್ಟೆ ವ್ಯವಸ್ಥೆಗೆ ಭಾರೀ ಸರ್ಜರಿ ಬೇಕು ಎಂದು ಮನಗಂಡ ಕೇಂದ್ರ ಸರಕಾರ ಕಿಸಾನ್ ಬಿಲ್ 2020 ನ್ನು  ರಚಿಸಿ ಅದನ್ನು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಪಾಸ್ ಮಾಡಿ, ರಾಷ್ಟ್ರಪತಿಗಳ ಅಂಕಿತಕ್ಕೆ ಕಳುಹಿಸಿದೆ. ಅಲ್ಲಿ ಅವರ ಅಂಕಿತ ಬಿದ್ದ ನಂತರ ಅದು ಜ್ಯಾರಿಗೆ ಬರಲಿದೆ. ಈ ಬಿಲ್ ಬಗ್ಗೆ ಜನ ಮನಬಂದಂತೆ ಮಾತಾಡುತ್ತಾರೆ. ಆದರೆ ಪ್ರಧಾನಿಗಳು ಅದರ ಬಗ್ಗೆ ಸ್ಪಷ್ಟಣೆಯನ್ನೂ ನೀಡಿದ್ದಾರೆ.  ಕೃಷಿ ಕ್ಷೇತ್ರದ ಸುಧಾರಣೆಗೆ ಕೆಲವು ಕಾನೂನಾತ್ಮಕ ಬದಲಾವಣೆ ಬೇಕೇ…

Read more
vertical farming

ಕಡಿಮೆ ಸ್ಥಳದಲ್ಲಿ ಹೆಚ್ಚು ಬೆಳೆ ಬೆಳೆಯಬಹುದಾದ ವರ್ಟಿಕಲ್ ಕೃಷಿ.

ಕೃಷಿ ದಿನದಿಂದ ದಿನಕ್ಕೆ ಬದಲಾವಣೆಯ ಮೆಟ್ಟಲೇರುತ್ತಾ ಇರುತ್ತದೆ. ಇನ್ನು ಮುಂದಿನ ದಿನಗಳಲ್ಲಿ ಅತೀ ಕಡಿಮೆ ಸ್ಥಳಾವಕಾಶದಲ್ಲಿ ಅಧಿಕ ಬೆಳೆ ಬೆಳೆಸಿ, ಅಧಿಕ ಇಳುವರಿ ಪಡೆಯುವುದೇ ಆಗಿರುತ್ತದೆ. ಸುಮಾರು 30-40 ವರ್ಷದ ಹಿಂದೆ ನಮ್ಮ ಕೃಷಿ ಹೇಗಿತ್ತು ಎಂಬುದನ್ನು ಆ ವಯೋಮಾನದವರು ಒಮ್ಮೆ ನೆನಪಿಸಿಕೊಳ್ಳಿ. ಅದೇ ರೀತಿ ತುಂಬಾ ಹಿರಿಯರಿದ್ದರೆ ಅವರ ಕಾಲದಲ್ಲಿ ಸುಮಾರು 50-60 ವರ್ಷಗಳ ಹಿಂದೆ ಹೇಗಿತ್ತು ಎಂಬುದನ್ನು ಒಮ್ಮೆ ಕೇಳಿ ನೋಡಿ ಈಗಿನದ್ದು   ನಮಗೆಲ್ಲಾ ಗೊತ್ತಿದೆ ತಾನೇ? ಎಲ್ಲವೂ ಭಾರೀ ಬದಲಾವಣೆ ಆಗಿದೆ. ಆಗುತ್ತಲೇ…

Read more

ಕಾಡು ಪ್ರಾಣಿಗಳಿಗೆ ಇನ್ನು ಹೊಲವೇ ಖಾಯಂ ವಾಸ್ತವ್ಯ!

ಸರಕಾರ ಈಗ ಅರಣ್ಯ ಇಲಾಖೆಯ ಸುಪರ್ದಿಯಲ್ಲಿದ್ದ ಸುಮಾರು 23 ಲಕ್ಷ ಎಕ್ರೆ ಅರಣ್ಯ ( ಡೀಮ್ದ್ ಫೋರೆಸ್ಟ್ )ನಲ್ಲಿ 15 ಲಕ್ಷ ಎಕರೆ  ಭೂಮಿಯನ್ನು ಸರಕಾರ ಕಂದಾಯ ಇಲಾಖೆಗೆ ವರ್ಗಾಯಿಸಲು ನಿರ್ಧರಿಸಿದೆ. ಈಗಲೇ ಅರಣ್ಯ ನಾಶದಿಂದ  ಕೃಷಿಕರ 10- 20 % ದಷ್ಟು ಬೆಳೆ ಕಾಡು ಪ್ರಾಣಿಗಳ ಪಾಲಾಗುತ್ತಿದೆ. ಒಂದು ವೇಳೆ ಇನ್ನೂ ಕಾಡು ಕಡಿಮೆಯಾದರೆ  ಕೃಷಿಕರ ಹೊಲದಲ್ಲೇ ಕಾಡು ಪ್ರಾಣಿಗಳು ವಾಸಮಾಡಬಹುದು. ಬೆಳೆಗಳು ಕೋತಿ, ಆನೆ ಕಾಡೆಮ್ಮೆಗಳ ಪಾಲಾಗಬಹುದು. ಹಟ್ಟಿಯಲ್ಲಿರುವ ಹಸುಗಳು ಹುಲಿ, ಚಿರತೆಯ ಪಾಲಾದರೂ…

Read more

ರೈತರು ಬುದ್ಧಿವಂತರಾಗದಿದ್ದರೆ ಉಳಿಗಾಲವಿಲ್ಲ. ತಿಳಿದಿರಲಿ.

ನಮ್ಮ ದೇಶದಲ್ಲಿ ಕೃಷಿಕರನ್ನು ಮಾತ್ರ ಯಾವ ರೀತಿಯಲ್ಲೂ ಮೋಸಮಾಡಬಹುದೇನೋ ಅನ್ನಿಸುತ್ತಿದೆ. ಕೃಷಿಕರಿಗೆ ಬೇಕಾಗುವ ಯಂತ್ರೋಪಕರಣ, ಗೊಬ್ಬರ, ಕೀಟ ನಾಶಕ, ಹೀಗೆ ಬೇಕಾಗುವ ಕೃಷಿ ಒಳಸುರಿ ಮಾರಾಟ ಮಾಡುವವರು ದಿನಕ್ಕೆ ಒಬ್ಬರಂತೆ ಸೃಷ್ಟಿಯಾಗುತ್ತಿದ್ದಾರೆ. ನಮಗೆ ಹೇಗಾದರೂ ಮಾಡಿ ಇಳುವರಿ ಹೆಚ್ಚಿಸಿಕೊಳ್ಳಬೇಕೆಂಬ ಹಂಬಲ. ಅವರಿಗೆ ಇದೇ ಬಂಡವಾಳ. ಹೊಸ ಹೊಸ ಉತ್ಪನ್ನಗಳು. ಹೊಸ ಬಾಟಲಿಯಲ್ಲಿ ಅಧಿಕ ಬೆಲೆಯ ಹಳೇ ಸಾಮಾನುಗಳು ಅಷ್ಟೇ ಬದಲಾವಣೆ. ಕೃಷಿಕರ ವೀಕ್ ನೆಸ್-ಇನ್ನೊಬ್ಬರ ಬಂಡವಾಳ: ಕೃಷಿಕರಲ್ಲಿ ಬಹುತೇಕ ಎಲ್ಲರಿಗೂ ಪರಸ್ಪರ ನಂಬಿಕೆ ಕಡಿಮೆ. ಅದು ಒಳ್ಳೆಯದೇ?ಇದು…

Read more
ಅಡಿಕೆ- ಕರಿಮೆಣಸು ಬೆಳೆಗಳ ತೋಟಕ್ಕೆ ಅಗತೆ ವರ್ಜ್ಯ

ಅಡಿಕೆ- ಕರಿಮೆಣಸು ಬೆಳೆಗಳ  ತೋಟಕ್ಕೆ ಅಗತೆ, ಉಳುಮೆ ವರ್ಜ್ಯ.

ಅಡಿಕೆ ಮರಗಳ ಬೇರುಗಳು ಮೆತ್ತನೆಯ ಮೇಲ್ಮಣ್ಣಿನಲ್ಲಿ ಹರಡಿ ಬೆಳೆಯುವ ಗುಣದ ಸಸ್ಯಗಳು. ಆದ ಕಾರಣ ಮೇಲು ಭಾಗವನ್ನು ಅಗತೆ, ಉಳುಮೆ ಮಾಡುವುದರಿಂದ  ಬೇರಿಗೆ ಹಾನಿಯಾಗುತ್ತದೆ. ಅಲ್ಲದೆ ಬೇರೆ ಬೇರೆ ತೊಂದರೆಗಳೂ ಉಂಟಾಗುತ್ತವೆ.ಅಡಿಕೆ ಮರದ ಬುಡದಲ್ಲಿ ಕರಿಮೆಣಸು ಇದ್ದರೆ ಯಾವ ಕಾರಣಕ್ಕೂ ಬುಡ ಭಾಗವನ್ನು  ಕೆರೆಯುವುದೂ ಸಹ ಮಾಡಬಾರದು. ಇದರಿಂದ ಕರಿಮೆಣಸಿನ ಬಳ್ಳಿ ಸಾಯಬಹುದು, ಅಥವಾ ಸೊರಗಬಹುದು. ಬುಡ ಬುಡಿಸುವುದು ಹಳೆ ಪದ್ದತಿ: ನಮ್ಮ ಹಿರಿಯರು ತಿಳಿದೋ ತಿಳಿಯದೆಯೋ ಕೆಲವು ಬೇಸಾಯ ಕ್ರಮಗಳನ್ನು ಅನುಸರಿಸುತ್ತಿದ್ದರು. ಅದರಲ್ಲಿ ಒಂದು ಬುಡ…

Read more

ರೈತರ ಆದಾಯಕ್ಕೆ ಬ್ಲೇಡ್ ಹಾಕದಿದ್ದರೆ ಅದಾಯ ತಕ್ಷಣ ದ್ವಿಗುಣ.

ಭಾರತ ಸರಕಾರವು 2022 ವೇಳೆಗೆ  ದೇಶದ ರೈತರ ಆದಾಯ ದ್ವಿಗುಣಗೊಳಿಸುವ ಗುರಿಯನ್ನು ಹೊಂದಿರುವುದು ನಮೆಗೆಲ್ಲಾ ಗೊತ್ತಿದೆ. ಇದಕ್ಕೆ ಸಾಕಷ್ಟು ತಯಾರಿಗಳು ಆಗುತ್ತಿದೆ. ಈಗ ನಡೆಯುತ್ತಿರುವ ಪೂರ್ವ ತಯಾರಿಯಲ್ಲಿ ಯಾಕೋ ಭಾರತ ರೈತರ ಆದಾಯವು ದ್ವಿಗುಣಗೊಂಡರೂ ಸಹ ಅದು ಅವನಿಗೆ ಉಳಿಯಲಿಕ್ಕಿಲ್ಲವೇನೋ ಅನ್ನಿಸುತ್ತಿದೆ. ರೈತರ ಆದಾಯ ದ್ವಿಗುಣವಾಗುವುದು (doubling farmers‘ income) ಅನಿವಾರ್ಯ. ಅದರ ಅಗತ್ಯ ಆಡಳಿತ ನಡೆಸುವ ನಮ್ಮ ಮುಖಂಡರಿಗೆ ತಿಳುವಳಿಕೆಗ ಬಂದುದೂ ಸಹ ಸ್ವಾಗತಾರ್ಹ. ಯಾವಾಗಲೋ  ಅದನ್ನು ಸರಕಾರ  ಗಮನಿಸಿ ಅದಕ್ಕೆ ಬೇಕಾದ ಕಾರ್ಯಕ್ರಮಗಳನ್ನು  ಹಾಕಿಕೊಳ್ಳಬೇಕಿತ್ತು. ಈಗಲಾದರೂ…

Read more
brinja

ಬಿಟಿ ಬದನೆ ಬಂದರೆ ಕೀಟನಾಶಕ ಬಳಸದ ಬದನೆ ತಿನ್ನಬಹುದು.

ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಬಿಟಿ ಬದನೆಯ ಬೇಸಾಯ ಸದ್ದಿಲದ್ದೆ ಕರ್ನಾಟಕದಲ್ಲಿ ರೈತರು ಎಚ್ಚರದಿಂದಿರಿ ಎಂಬ    ವಿರೋಧಿ ಹೋರಾಟದ ಸಂದೇಶಗಳು ರವಾನೆಯಾಗುತ್ತಿವೆ. ಯಾಕೆ ಬಿಟಿ ಬದನೆ ಬೇಡ ಎಂದು ತಿಳಿಯುತ್ತಿಲ್ಲ. ವೈಜ್ಞಾನಿಕ ಮೂಲಗಳು ಬಿಟಿಯಿಂದ ತೊಂದರೆ ಇಲ್ಲ ಎಂಬುದನ್ನು ಆದಾರ ಸಹಿತ ಹೇಳಿದರೆ  ಬಿಟಿ ಬೇಡ ಎನ್ನುವವರು ತಮ್ಮದೇ ಆದ ವಾದಗಳಿಂದ ಜನರನ್ನು ಅಂಜಿಸುತ್ತಿದ್ದಾರೆ. ವಿಜ್ಞಾನ ಹೇಳುತ್ತದೆ ಹೀಗೆ: ಬಿಟಿ ಎಂದರೆ ವಂಶವಾಹಿ ಮಾರ್ಪಾಡು ಮಾಡಲಾದ ತಳಿ. ಮಾರ್ಪಾಡು ಎಂದರೆ ಕೆಲವು ಅವಗುಣಗಳನ್ನು ತೆಗೆದು ಅಗತ್ಯ ಗುಣಗಳನ್ನು ಅದರ…

Read more
ತೆಂಗಿನ ನೈಸರ್ಗಿಕ ಹೈಬ್ರೀಡ್ ತಳಿ

ತೆಂಗು ಬೆಳೆಸುವವರೆಲ್ಲರೂ ತಿಳಿದಿರಬೇಕಾದ ಪ್ರಮುಖ ವಿಚಾರ.

ಜಗತ್ತಿನ ಸುಮಾರು 80 ಕ್ಕೂ ಹೆಚ್ಚಿನ ದೇಶಗಳಲ್ಲಿ  ಬೆಳೆಸಲ್ಪಡುತ್ತಿರುವ  ತೆಂಗಿಗೆ ಬೆಳೆಯಲ್ಲದೆ ದೈವಿಕ ಸ್ಥಾನವನ್ನೂ ನೀಡಲಾಗಿದೆ. ನಮ್ಮ ಪೂರ್ವಜರಿಂದ ಲಾಗಾಯ್ತು ಈಗಿನವರೆಗೂ ಜನ ತೆಂಗನ್ನು ನಂಬಿದ್ದಾರೆ. ನಂಬಿಕೆಗೆ ಯಾವಾಗಲೂ ಕುಂದು ತಾರದ ಬೆಳೆ ಎಂದರೆ ತೆಂಗು ಎನ್ನಬಹುದು. ತೆಂಗಿನ ಮೂಲ  ಯಾವುದು: ಕೆಲವು ಪ್ರಕೃತಿಯ ನಿಘೂಢಗಳಲ್ಲಿ ತೆಂಗೂ ಒಂದು. ಇದು ಮೂಲತಹ ಎಲ್ಲಿ ಬೆಳೆಯುತ್ತಿತ್ತು, ಹೇಗೆ ಇದು ಬೆಳೆಯ ಸ್ಥಾನವನ್ನು ಪಡೆಯಿತು ಎಂಬ ಬಗ್ಗೆ ನಿಖರ ಉಲ್ಲೇಖ ಇಂದಿನ ತನಕವೂ ಇಲ್ಲ. ಭಾರತ ದೇಶದಲ್ಲಿ ವೇದಗಳ ಕಾಲದಿಂದಲೂ…

Read more

ಬೆಳೆ ದಾಖಲೆ ಮಾಡಿಲ್ಲವೇ? ಮಾಡಿ. ಬಹಳ ಪ್ರಯೊಜನ ಇದೆ.

ರೈತರ ಹೊಲದಲ್ಲಿ ಯಾವ ಬೆಳೆ ಇದೆ, ಎಂಬುದನ್ನು ಅವರವರೇ ದಾಖಲೀಕರಣ ಮಾಡಿದರೆ ಅದೇ ಉತ್ತಮ. ಯಾಕೆಂದರೆ ಬೇರೆಯವರು ಮಾಡುವುದು ಎಷ್ಟಾದರೂ ಅಷ್ಟೇ. ಇದು ಇಂದು ಬೆಳೆ ದಾಖಲೀಕರಣ  ಮಾಡಿದಾಗ ತಿಳಿದ ಸಂಗತಿ. ಸ್ವಲ್ಪ ತರಬೇತಿ ಅಥವಾ ಸ್ವಲ್ಪ ಮೊಬೈಲ್ ಫೋನ್ ಬಳಕೆ ಗೊತ್ತಿದ್ದವರ ಸಹಾಯ ತೆಗೆದುಕೊಂಡರೆ ಇದನ್ನು ಯಾರೂ ಬಳಸಬಹುದು. ಸರಕಾರ ಈ ಕೆಲಸವನ್ನು ರೈತರ ತಲೆಗೇ ಹಾಕಿರುವುದು ಮತ್ತೇನಕ್ಕೂ ಅಲ್ಲ. ಈ ಕೆಲಸಕ್ಕೆ ಸ್ವಲ್ಪ ಸಮಯ ಬೇಕಾಗುತ್ತದೆ. GPS  ಸರಿಯಾಗಿ ಸಿಗಬೇಕು. ಕೆಲವೊಮ್ಮೆ ಬೇಗ ಆಗಬಹುದು….

Read more

ತರಕಾರಿ ಬೀಜಗಳು ಈಗ ತ್ವರಿತವಾಗಿ ಲಭ್ಯ

ರೈತರ ಬದುಕು ಸಕಾಲದಲ್ಲಿ ಮಳೆ ಮತ್ತು ಸಕಾಲದಲ್ಲಿ ಬೀಜದ ಲಭ್ಯತೆ ಮೇಲೆ ನಿಂತಿದೆ. ಗುಣಮಟ್ಟದ ಬೀಜಗಳನ್ನು ತ್ವರಿತವಾಗಿ ತಲುಪಿಸಲು ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ  ಜೊತೆಯಾಗಿ ಹೊಸ ವ್ಯವಸ್ಥೆಯನ್ನು ಹಾಕಿಕೊಂಡಿದೆ. ಭಾರತದಲ್ಲೇ ಪ್ರಥಮ ಬಾರಿಗೆ ಎಂಬಂತೆ ಬೆಂಗಳೂರಿನ ಹೇಸರಘಟ್ಟದಲ್ಲಿರುವ  ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ   IIHR ತನ್ನ ಸೀಡ್ ಪೋರ್ಟಲ್ ಅನ್ನು ಪ್ರಾರಂಭಿಸಿದೆ. ಇದನ್ನು  ರೈತರಿಗೆ ನೇರವಾಗಿ ತಲುಪಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇದರ ಯೇನೋ ಅಗ್ರಿಕಲ್ಚರ್  ಜೊತೆ…

Read more
error: Content is protected !!