ಕೆಂಪು ರಾಶಿ ಸ್ವಲ್ಪ ಹಿನ್ನಡೆ – ಚಾಲಿಗೆ ಬೇಡಿಕೆ

ಕೆಂಪು ರಾಶಿ ಸ್ವಲ್ಪ ಹಿನ್ನಡೆ – ಚಾಲಿಗೆ ಬೇಡಿಕೆ ಕಡಿಮೆ -ಮಾರುಕಟ್ಟೆಗೆ ಮಾಲು ಇಲ್ಲ.

ಕೆಂಪು ರಾಶಿ ಅಡಿಕೆ ಮಾರುಕಟ್ಟೆ ಹೇಗಾದರೂ ಒಮ್ಮೆ 55,000 ತಲುಪಿತು. ಆದರೆ ಶುಕ್ರವಾರದ ಮಾರುಕಟ್ಟೆ, ಭಾನುವಾರದ ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಹಾಗೂ ಇಂದು 12-09-2022 ಸಾಗರ, ಶಿವಮೊಗ್ಗದಲ್ಲಿನ ವ್ಯವಹಾರ ನೋಡುವಾಗ ಸ್ವಲ್ಪ ಸ್ವಲ್ಪ ಹಿಂದೆ ಬರುವ ಲಕ್ಷಣ ಕಾಣಿಸುತ್ತಿದೆ.  ನಿಖರವಾಗಿ ಹಿಂದೆ ಬಂತು ಎಂಬಂತಿಲ್ಲ. ಇನ್ನೂ ಒಂದೆರಡು ದಿನಗಳ ಮಾರುಕಟ್ಟೆ ಸ್ಥಿತಿ ನೋಡಿ ಅಂದಾಜು ಮಾಡಬಹುದಷ್ಟೇ. ಚಾಲಿ ಮಾರುಕಟ್ಟೆಯಲ್ಲಿ ಖಾಸಗಿಯವರು ಸ್ವಲ್ಪ ಮುಂದೆ ಬಂದಿದ್ದಾರೆ. ಅಡಿಕೆ ಬರುತ್ತಿಲ್ಲ ಎಂಬ ಕಾರಣಕ್ಕೆ ದರ ಏರಿಸಲಾಗಿದೆ ಎನ್ನುತ್ತಾರೆ. ಚಾಲಿ ದರ ಏರಿಕೆ-…

Read more
ಎನ್ ಸಿ ಪಟೇಲ್ ರವರಿಗೆ ಗೌರವ ಡಾಕ್ಟರೇಟ್

ಎನ್ ಸಿ ಪಟೇಲ್ ರವರಿಗೆ ಗೌರವ ಡಾಕ್ಟರೇಟ್ – ಯೋಗ್ಯ ವ್ಯಕ್ತಿಗೆ ಯೋಗ್ಯ ಪುರಸ್ಕಾರ.

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು ಇವರು ತಮ್ಮ  56 ನೇ ಘಟಿಕೋತ್ಸವದಲ್ಲಿ ಎನ್ ಸಿ ಪಟೇಲ್  ಎಂಬ  ಅ ತ್ಯುತ್ತಮ ಕೃಷಿಕರಿಗೆ ಗೌರವ ಡಾಕ್ಟರೇಟ್ ನೀಡಿದ್ದು ಯೋಗ್ಯ ವ್ಯಕ್ತಿಗೆ ಯೋಗ್ಯ ಪುರಸ್ಕಾರ ಎನ್ನಿಸಿದೆ. ಶ್ರಿಯುತ  ಎನ್ ಸಿ ಪಟೇಲ್ ಇವರು ತಮ್ಮ ಇಡೀ ಜೀವಮಾನವನ್ನೇ ಕೃಷಿಗಾಗಿ ಮುಡಿಪಾಗಿಟ್ಟವರು. ತೋಟಗಾರಿಕಾ ಬೆಳೆಗಳಾದ ಮಾವು, ದ್ರಾಕ್ಷಿ, ದಾಳಿಂಬೆ, ಸೀಬೆ, ನೇರಳೆ ಮುಂತಾದ ಬೆಳೆಗಳನ್ನು ಅಚ್ಚುಕಟ್ಟಾಗಿ ಬೆಳೆಯುತ್ತಿರುವ ಮಾದರಿ ರೈತ. ನಾಗದಾಸನಹಳ್ಳಿ ಚಿಕ್ಕಕೆಂಪಣ್ಣ ಪಟೇಲ್ (Nagadasanahalli Chikakempanna patel) ಬೆಂಗಳೂರು ಹೊರವಲಯದ ಯಲಹಂಕದ…

Read more
ಚಾಲಿ ಅಡಿಕೆ ತುಸು ಹಿಮ್ಮುಖ- ಕೆಂಪು ರಾಶಿ ಮಾರುಕಟ್ಟೆ ಸ್ಥಿರ

ಚಾಲಿ ಅಡಿಕೆ ತುಸು ಹಿಮ್ಮುಖ- ಕೆಂಪು ರಾಶಿ ಮಾರುಕಟ್ಟೆ ಸ್ಥಿರ.

ಚಾಲಿ ಅಡಿಕೆ ಧಾರಣೆಯಲ್ಲಿ ಸ್ವಲ್ಪ ಹಿಮ್ಮುಖವಾಗಿದೆ ಎಂಬ ಸುದ್ದಿ. ಹಾಗೆಂದು ದೊಡ್ಡ ಇಳಿಕೆ ಆಗಿಲ್ಲ. ದರ ಮೇಲೆ ಏರಲಿಲ್ಲ ಎಂದಷ್ಟೇ ಹೇಳಬಹುದು. ಕ್ಯಾಂಪ್ಕೋ ತನ್ನ ಸೂಚಿತ ಮಾಮೂಲಿ ದರವನ್ನೇ ಮುಂದುವರಿಸಿದೆ. ಆದರೆ ಗುಣಮಟ್ಟದ ಹೆಸರಿನಲ್ಲಿ ಅಡಿಕೆ ಖರೀದಿಯಲ್ಲಿ  ಸ್ವಲ್ಪ ಹಿಮ್ಮುಖ ಅಷ್ಟೇ. ಒಳ್ಳೆಯ ಅಡಿಕೆಗೆ ಖಾಸಗಿಯವರು 48,000-48500  ತನಕ ಖರೀದಿ ಮಾಡುತ್ತಿದ್ದಾರೆ. ಪರಿಸ್ಥಿತಿ  ಪಿತೃ ಪಕ್ಷ ಮುಗಿಯುವ ತನಕ ಹೀಗೇ ಮುಂದುವರಿಯಲಿದೆ ಎಂಬ ಸುದ್ದಿಗಳು ಕೇಳಿ ಬರುತ್ತಿವೆ. ಬೆಳೆಗಾರರು ನಿರಾಶರಾಗಬೇಕಾಗಿಲ್ಲ. ಅಡಿಕೆಗೆ ಬೇಡಿಕೆ ಇದೆ. ಬೆಲೆಯೂ ಬರುತ್ತದೆ….

Read more
ಸಕ್ಕರೆ ಹೆಚ್ಚಾಗಿದೆ- ರೈತರು ಕಬ್ಬು ಬೆಳೆಯಬೇಡಿ

ಸಕ್ಕರೆ ಉತ್ಪಾದನೆ ಹೆಚ್ಚಿದೆ- ರೈತರು ಕಬ್ಬು ಬೆಳೆಯಬೇಡಿ. ಸರಕಾರದ ಹೇಳಿಕೆ.

ದೇಶದಲ್ಲಿ ಸಕ್ಕರೆ ಉತ್ಪಾದನೆ ಹೆಚ್ಚಾಗಿದೆ. ಹಾಗಾಗಿ ಕಬ್ಬು ಬೆಳೆಯುವ ರೈತರು ಇನ್ನು ಬೆಳೆಯಬೇಡಿ. ಬೆಳೆ ಪರಿವರ್ತನೆ ಮಾಡಿ, ಇಂಧನ ಮತ್ತು ಶಕ್ತಿ ಉತ್ಪಾದನೆ ಕಡೆಗೆ ಗಮನಹರಿಸಬೇಕು ಎಂಬುದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಮಂತ್ರಿಗಳಾದ ನಿಥಿನ್ ಗಡ್ಕರಿಯವರ ಮಾತು.  ಭಾರತ ದೇಶದಲ್ಲಿ ಕಬ್ಬು ಬೆಳೆ ಹೆಚ್ಚಾಗುತ್ತಿದ್ದು, ಎಲ್ಲರೂ ಸಕ್ಕರೆ ಕಾರ್ಖಾನೆಗೆ ಕಬ್ಬು ಹಾಕುತ್ತಾರೆ. ಉತ್ಪಾದಿಸಿದ ಸಕ್ಕರೆ ಮಿಗತೆಯಾಗಿ ಕಾರ್ಖಾನೆಗಳು ನಷ್ಟಕ್ಕೊಳಗಾಗುತ್ತಿವೆಯಂತೆ. ನಮ್ಮ ದೇಶದಲ್ಲಿರುವ ಬಹುತೇಕ ಸಕ್ಕರೆ ಕಾರ್ಖಾನೆಗಳು ಈಗ ಸಕ್ಕರೆ ಉತ್ಪಾದನೆಗಾಗಿ ಕೆಲಸ ಮಾಡುತ್ತಿಲ್ಲ. ಬದಲಿಗೆ…

Read more
ಡಿಜಿಟಲೀಕರಣದ ಪ್ರಯೋಜನ ಪಡೆಯುತ್ತಿರುವವರಲ್ಲಿ ವಯಸ್ಕರೂ ಇದ್ದಾರೆ.

ಡಿಜಿಟಲೀಕರಣದಲ್ಲಿ ಹೊಸ ಆಯಾಮವನ್ನು ಸೃಷ್ಟಿಸಿದ ನಮ್ಮ ದೇಶದ ಜನಸಮೂಹ.

ಭಾರತ ಸರಕಾರದ ಡಿಜಿಟಲೀಕರಣ  ದೇಶದಲ್ಲಿಹೊಸ ಆಯಾಮವನ್ನು ಸೃಷ್ಟಿಸಿದೆ. ನಮ್ಮ ಜನ ಇದಕ್ಕೆ ಒಗ್ಗಿಕೊಳ್ಳುತ್ತಿದ್ದಾರೆ. ನಮ್ಮೂರಿನ ಜನ ತರಕಾರಿ ಅಂಗಡಿಗೆ ಹೋದರೂ ಈಗ ಕೇಳುತ್ತಾರೆ, ಪೆಟಿಯಂ ಇದೆಯಾ,ಎಂದು.ಅಂಗಡಿಯವನಿಗೂ ಇದು ಒಂದು ಘನತೆಯ ವಿಷಯವಾಗಿದೆ.ಪಾನ್ ಬೀಡಾ ಅಂಗಡಿಯಲ್ಲೂ ಆನ್ ಲೈನ್ ಪೇಮೆಂಟ್.  ಒಂದಲ್ಲ ಎರಡು ಮೂರು ಕಡೆ QR ಕೋಡ್ ಹಾಳೆ ನೇತಾಡಿಸಿರುತ್ತಾರೆ. ಅಂಗಡಿಯವರು ಹೇಳುತ್ತಾರೆ, ಹಿಂದೆ ನಾಳೆ ಕೊಡುತ್ತೇನೆ ಎಂದು ಸಾಲ ಕೊಂಡೋಗುವ ಪ್ರಶ್ಣೆ ಇಲ್ಲ.  ಫೋನ್ ಹಿಡಿದು ತಟ್ಟನೆ ಹಣ ಹಾಕುತ್ತಾರೆ. ನಿಜ ಹಿಂದೆ ನಾವೆಲ್ಲಾ ಅಂಗಡಿಯಿಂದ…

Read more
ಚಾಲಿ, ಕೆಂಪು ಎರಡೂ ತೇಜಿ

ಚಾಲಿ, ಕೆಂಪು ಎರಡೂ ತೇಜಿ- ಬೆಳೆಗಾರರ ಬೆಲೆ ನಿರೀಕ್ಷೆ ಇನ್ನೂ ಮುಂದೆ.

ಚಾಲಿ ಅಡಿಕೆ ಧಾರಣೆ ನಿರೀಕ್ಷೆಯಂತೆ ಈ ತಿಂಗಳಾಂತ್ಯದ ಒಳಗೆ ಕಿಲೋ.500 ತಲುಪುವುದು ಬಹುತೇಕ ಖಾತ್ರಿಯಾದಂತಾಗಿದೆ. ಜೊತೆಗೆ ಕೆಂಪಡಿಕೆಯೂ ಏರಿಕೆ ಕಂಡಿದೆ. ಅದರೆ ನಿರೀಕ್ಷೆ ಮಾತ್ರ 60,000 ದ ವರೆಗೆ ಎಂದಿತ್ತು. ಅದಕ್ಕೆ ಪೂರಕವಾಗಿ ಪರಿಸ್ಥಿತಿಯೂ ಇತ್ತು. ಆದರೆ ದರ ಆ ಮಟ್ಟಕ್ಕೆ ಏರಿಕೆಯಾಗಲಿಲ್ಲ. 49,000 ದ ಆಸುಪಾಸಿನಲ್ಲಿದ್ದುದು, 52,000 -53,000 ಕ್ಕೆ ಏರಿಕೆಯಾಯಿತಷ್ಟೇ. ಕೆಂಪಡಿಕೆಯ ಮಾರುಕಟ್ಟೆಯನ್ನು ಚಾಲಿ ನುಂಗಿದಂತಾಗಿದೆ. ಸಾಮಾನ್ಯವಾಗಿ ಹಿಂದೆ ಆಗಸ್ಟ್ ತಿಂಗಳಿನಿಂದ ಸಪ್ಟೆಂಬರ್ ತಿಂಗಳ ನವರಾತ್ರೆ ವರೆಗೆ ಅಡಿಕೆ ತೇಜಿ ಆಗುವುದು ಮಾಮೂಲು. ಹಿರಿಯ…

Read more
ಅಡಿಕೆ ಮಾರುಕಟ್ಟೆಗೆ ಹೊಸ ಹುರುಪು- ಕೆಂಪು 52,000 ಚಾಲಿ 48,500

ಅಡಿಕೆ ಮಾರುಕಟ್ಟೆಗೆ ಹೊಸ ಹುರುಪು- ಕೆಂಪು 52,500 ಚಾಲಿ 48,500

ಈ ವಾರದಲ್ಲಿ ಅಡಿಕೆ ಮಾರುಕಟ್ಟೆಗೆ ಹೊಸ ಹುರುಪು ಬಂದಿದೆ. ಚಾಲಿ ಅಡಿಕೆದರ ಏರುತ್ತಿದೆ. ಕೆಂಪಡಿಕೆಯೂ ಏರಿಕೆಯಾಗಲಾರಂಭಿಸಿದೆ. ಇಂದು ಹೊಸ ಚಾಲಿ ಖಾಸಗಿ ಮಾರುಕಟ್ಟೆಯಲ್ಲಿ 48,500 ತನಕ ಖರೀದಿ ಮಾಡುವುದಾಗಿ ದರ ಪ್ರಕಟಿಸಿರುತ್ತಾರೆ. ಕೆಂಪಡಿಕೆ ಸರಾಸರಿ 52,500 ದಾಟಿದೆ. ಅಡಿಕೆ ಬೆಳೆಗಾರರ ಬಹುದಿನಗಳ ಆಸೆ ಇನ್ನು ಮುಂದಿನ ದಿನಗಳಲ್ಲಿ ಈಡೇರುವ ನಿರೀಕ್ಷೆ ಇದೆ. ಎಲ್ಲೆಡೆಯಲ್ಲೂ ಅಡಿಕೆಗೆ ಬೆಲೆ ಏರಿದ್ದೇ ಸುದ್ದಿ, ಎಲ್ಲರಿಗೂ ಖುಷಿಯೋ ಖುಷಿ. ದೇಶದ ಮಾರುಕಟ್ಟೆಗೆ  ಮಲೇಶಿಯಾ, ಇಂಡೋನೇಶಿಯಾ, ಶ್ರೀಲಂಕಾ ಗಳಿಂದ ಅಡಿಕೆ ಆಮದು ಆಗುತ್ತಲೇ ಇದೆ….

Read more
ಸೌಗಂದ್” ಅಡಿಕೆಯ ಬಳಕೆ ಹೆಚ್ಚಿಸಬಹುದಾದ ಮೌಲ್ಯವರ್ಧಿತ ಉತ್ಪನ್ನ

“ ಸೌಗಂದ್” ಅಡಿಕೆಯ ಬಳಕೆ ಹೆಚ್ಚಿಸಬಹುದಾದ ಮೌಲ್ಯವರ್ಧಿತ ಉತ್ಪನ್ನ.  

ಕ್ಯಾಂಪ್ಕೋ ಸಂಸ್ಥೆಯಿಂದ ಈಗ ಅಡಿಕೆಯ ಬಳಕೆ ಜನಸಾಮಾನ್ಯರೂ ಮಾಡಬಹುದಾದ ಉತ್ಪನ್ನ  “ಸೌಗಂಧ್” (Saugandh) ಅನ್ನು ಬಿಡುಗಡೆ ಆಗಿದೆ. ಬಹುಶಃ ಈ ಒಂದು ಉತ್ಪನ್ನವನ್ನು ಸಮರ್ಪಕವಾಗಿ ಮಾರುಕಟ್ಟೆ ಮಾಡಿದಲ್ಲಿ ಅಡಿಕೆಯ ಬಳಕೆ ಹೆಚ್ಚಳವಾಗಿ ಬೆಳೆಗಾರರಿಗೆ ಅನುಕೂಲವಾಗಬಹುದು. ಸಂಸ್ಥೆಯು ಸುಮಾರು 15 ವರ್ಷಕ್ಕೆ ಮೊತ್ತ ಮೊದಲಬಾರಿಗೆ ಅಡಿಕೆಯನ್ನು ಬಾಲಕರಿಂದ ಹಿಡಿದು ವೃದ್ಧರ ವರೆಗೂ, ಗಂಡಸರು ಹೆಂಗಸರೆಂಬ ಭೇಧವಿಲ್ಲದೆ ತಿನ್ನಬಹುದಾದ  “ಕಾಜೂ ಸುಪಾರಿ” ಎಂಬ ಎಂಬ ಉತ್ಪನ್ನವನ್ನು ಪರಿಚಯಿಸಿ ಜನಮನ್ನಣೆಗಳಿಸಿತ್ತು.  ಬಹುಶಃ ನಮ್ಮ ಅಡಿಕೆ ಬೆಳೆಗಾರರಿಗೆ ಗೊತ್ತಿದೆಯೋ ಇಲ್ಲವೋ, ನಮ್ಮ ಮನೆಯ ಶುಭ…

Read more
ಸಾವಯವ- ನೈಸರ್ಗಿಕ ಕೃಷಿ

ಸಾವಯವ- ನೈಸರ್ಗಿಕ ಕೃಷಿಗೆ ಬನ್ನಿ- ಸರಕಾರಕ್ಕೆ 2.10 ಲಕ್ಷ ಕೋಟಿ ಉಳಿಸಿ.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸ್ವಾತಂತ್ರದ ಅಮೃತ ಮಹೋತ್ಸವದ ಸಂದರ್ಭದ  ಭಾಷಣದಲ್ಲಿ ಕೃಷಿಕರಿಗೆ ನೀಡಿದ ಸಂದೇಶ ಸಾವಯವ – ನೈಸರ್ಗಿಕ ಕೃಷಿಗೆ ಬದಲಾಗಿ ದೇಶಕ್ಕೆ ಲಕ್ಷಾಂತರ ಕೋಟಿ ಉಳಿಸಿ ಎಂದು. ಪ್ರಧಾನಿಗಳ ಆಶಯ ಸರಿ. ದೇಶ ಈಗಾಗಲೇ ಕೃಷಿಗಾಗಿ ಬಳಕೆಮಾಡುವ ರಸಗೊಬ್ಬರವನ್ನು ಆಮದು ಮಾಡಿಕೊಳ್ಳುವುದಕ್ಕಾಗಿ 2.10 ಲಕ್ಷ ಕೋಟಿ ಹಣವನ್ನು ವಿದೇಶಗಳಿಗೆ ಸಂದಾಯ ಮಾಡುತ್ತದೆ. ದೇಶದಲ್ಲಿ ಬಹುಷಃ ರಸಗೊಬ್ಬರ ತಯಾರಾಗುವುದಿಲ್ಲ. ವಿದೇಶಗಳಿಂದ ಕಚ್ಚಾ  ಸಾಮಾಗ್ರಿಗಳನ್ನು ತಂದು ಇಲ್ಲಿ ಪ್ಯಾಕಿಂಗ್ ಮಾಡಿ ರೈತರಿಗೆ ಒದಗಿಸಲಾಗುತ್ತದೆ ಎನ್ನಿಸುತ್ತದೆ. ಪ್ರಧಾನ ಮಂತ್ರಿಗಳಲ್ಲ,…

Read more
ಏರಿಕೆಯತ್ತ ಅಡಿಕೆ ದಾರಣೆ- ಸದ್ಯವೇ ಬೆಳೆಗಾರರ ನಿರೀಕ್ಷೆ

ಏರಿಕೆಯತ್ತ ಅಡಿಕೆ ದಾರಣೆ- ಸದ್ಯವೇ ಬೆಳೆಗಾರರ ನಿರೀಕ್ಷೆ ರೂ.500 ರತ್ತ.

ಆಗಸ್ಟ್ ಮೊದಲ ವಾರದಲ್ಲಿ ಮಾರುಕಟ್ಟೆಗೆ ಅಡಿಕೆ ಬರುವ ಪ್ರಮಾಣವೇ ಕಡಿಮೆಯಾದ ಕಾರಣ ಸ್ವಲ್ಪ ಸಂಚಲನ ಆಗುವ ಲಕ್ಷಣ ಕಂಡು ಬಂದಿತ್ತಾದರೂ ಅದಕ್ಕೆ ವಿರುದ್ಧವಾಗಿ ಧಾರಣೆ ಏರಿಕೆಯಾತ್ತ ಸಾಗುತ್ತಿದೆ. ಚಾಲಿ ಮಾರುಕಟ್ಟೆಯಲ್ಲಿ ಎರಡು ತಿಂಗಳಿಂದ ನಿಂತಲ್ಲೇ ಸ್ಥಬ್ಧವಾಗಿದ್ದ ಹೊಸ ಅಡಿಕೆ ಧಾರಣೆಗೆ ಸಂಚಲನ ಸಿಕ್ಕಿತು. ಹಳತು ಸಹ ಸ್ವಲ್ಪ ಏರಿತು. ಕೆಂಪಡಿಕೆಯೂ ಏರಿಕೆಯಾಗಲಾರಂಭಿಸಿತು.  ಎಷ್ಟರ ತನಕ ಏರಬಹುದು, ಎಂಬದರ ಯಾವ ಮಾಹಿತಿಯೂ ಇಲ್ಲ. ಪರಿಸ್ಥಿತಿಯನ್ನು ನೋಡಿದರೆ ಇನ್ನು ಏರುತ್ತಾ ಹೂವುದೇ ಒರತು ಇಳಿಕೆ ಸಾಧ್ಯತೆ ತುಂಬಾ ಕಡಿಮೆ. ಕೆಲವು…

Read more
error: Content is protected !!