ರಾಸಾಯನಿಕ + ಸಾವಯವ ಎರಡು ಬಳಸಿ ಇಳುವರಿ

ರಾಸಾಯನಿಕ + ಸಾವಯವ = ಇಳುವರಿ ಉತ್ತಮ.

ನಾನು ರಾಸಾಯನಿಕ ಬಿಟ್ಟು ಬೇರೆ ಬಳಸುವುದೇ ಇಲ್ಲ. ನಾನು ಗೊಬ್ಬರಕ್ಕಾಗಿ ಹಸು ಸಾಕುವುದೇ ಇಲ್ಲ. ಕಡಿಮೆ ಖರ್ಚಿನಲ್ಲಿ ಗೊಬ್ಬರ ಆಗುತ್ತದೆ. ನನಗೆ ಇಳುವರಿಗೆ ಯಾವ ತೊಂದರೆಯೂ ಆಗಿಲ್ಲ ಎಂಬ ತರ್ಕ ಮಾಡುವ ರೈತರು ಒಂದಲ್ಲ ಒಂದು ದಿನ ತಮ್ಮ ಈ ಮನೋಭಾವನೆಯನ್ನು ಬದಲಿಸುತ್ತಾರೆ. ಈ ರಾಸಾಯನಿಕ ಗೊಬ್ಬರಗಳು ಮಣ್ಣಿನ ಧಕ್ಕೆ ಸಹನೆ ಇರುವಷ್ಟು ಸಮಯ ಮಾತ್ರ ಪ್ರಯೋಜನಕಾರಿ. ನಂತರ ಅದು ಕೆಲವು ಸಮಸ್ಯೆಗಳನ್ನು ತಂದೊಡ್ಡುತ್ತದೆ. ಸಾವಯವ ತ್ಯಾಜ್ಯಗಳನ್ನು ಮಣ್ಣಿಗೆ ಸೇರಿಸುತ್ತಾ ಇದ್ದರೆ ಮಣ್ಣಿನ ರಚನೆ ಉತ್ತಮವಾಗಿ ರಸಗೊಬ್ಬರ…

Read more

ಸಾವಯವ ಗೊಬ್ಬರ ನೀವೇ ಮಾಡುವುದು ಉತ್ತಮ.

ಸಾವಯವ ಗೊಬ್ಬರ ತಯಾರಿಸುವುದು  ನಮಗೇನೂ ಹೊಸತಲ್ಲ.  ಹತ್ತಿಪ್ಪತ್ತು ವರ್ಷದ  ಹಿಂದೆ ಇದನ್ನು ನಾವು ಕೊಂಡು ತರುತ್ತಿರಲಿಲ್ಲ. ನಮ್ಮಲ್ಲೇ ತಯಾರಿಸುತ್ತಿದ್ದೆವು. ಈಗ ನಮಗೆ ಹೊರಗಿನ ವಸ್ತು ಸುಂದರವಾಗಿ ಕಾಣುವ ಕಾರಣ ಅದಕ್ಕೆ ಮಾರು ಹೋಗುತ್ತಿದ್ದೇವೆ.  ನಮ್ಮಲೇ ಎಲ್ಲಾ ಪರಿಕರಗಳು ಇರುವಾಗ  ಯಾಕೆ ಬೇರೆ ಕಡೆಯಿಂದ ಗೊಬ್ಬರಗಳನ್ನು ತರಬೇಕು. ಯಾವ  ತಯಾರಕರಲ್ಲೂ ಮೂಲವಸ್ತುಗಳು ಅವರ  ಬಳಿ ಇಲ್ಲ. ಅವರೂ ಬೇರೆ ಕಡೆಯಿಂದ ತಂದು  ಹೊಸ ಚೀಲದಲ್ಲಿ ತುಂಬಿ ನಮಗೆ ಮಾರಾಟ ಮಾಡುವುದು. ಸಾವಯವ ಗೊಬ್ಬರ ನಾವು ಮಾಡಿದರೆ  ಚಿನ್ನ. ಕೊಂಡು…

Read more
leaf de composing on field

ತೋಟಕ್ಕೆ ಸೊಪ್ಪು ಹಾಕಿ- ಮಣ್ಣಿನ ಆರೋಗ್ಯ ಹೆಚ್ಚಿಸಿ.

ತೋಟಕ್ಕೆ, ಗದ್ದೆಗೆ  ಹಾಗೆಯೇ ಇನ್ನಿತರ ಬೆಳೆಗಳಿಗೆ ಅನಾದಿ ಕಾಲದಿಂದಲೂ  ರೈತರು ಸೊಪ್ಪು ಹಾಕುತ್ತಿದ್ದರು. ಸೊಪ್ಪು ಹಾಕುವುದರಿಂದ ತುಂಬಾ ಪ್ರಯೋಜನ ಇದೆ. ಇದು ಉತ್ತಮ ಬೇಸಾಯ ಕ್ರಮ.ಮಣ್ಣಿನ ಸೂಕ್ಷ್ಮಾಣು ಜೀವಿಗಳ ಉತ್ತಮ ಕಾರ್ಯಚಟುವಟಿಕೆಗೆ ನೆರವಾಗಲು ಹಸುರೆಲೆ ಗೊಬ್ಬರ ಸಹಾಯಕ. ಸೊಪ್ಪು ಎಂದರೆ ಹಸುರೆಲೆ ಗೊಬ್ಬರ. ಹಸುರೆಲೆಗಳಲ್ಲಿ ಮುಖ್ಯ ಹಾಗೂ ಲಘು ಪೋಷಕಾಂಶಗಳು ಇರುವ ಕಾರಣ ಇದು ಕರಗಿ ಮಣ್ಣಿಗೆ ಸೇರಿ ಪೋಶಕಾಂಶಗಳನ್ನು ಬಿಡುಗಡೆ ಮಾಡುತ್ತದೆ. ಸಾಮಾನ್ಯವಾಗಿ ಮಳೆಗಾಲದಲ್ಲಿ ಹಸಿ ಸೊಪ್ಪನ್ನು ಹಾಕುತ್ತಾರೆ. ಅದು ಮಳೆಗಾಲ ಕಳೆಯುವಾಗ ಕರಗಿ ಗೊಬ್ಬರವಾಗುತ್ತದೆ….

Read more

ಸಾವಯವ ಸಾರಜನಕ ಗೊಬ್ಬರಗಳ ಮೂಲ ಇವು.

ಸಾರಜನಕ ಎಂಬುದು ರಾಸಾಯನಿಕ ರೂಪದಲ್ಲಿರುವ ಯೂರಿಯಾ, ಅಮೋನಿಯಂ ಸಲ್ಫೇಟ್ ಅಥವಾ ನೈಟ್ರೇಟ್ ಮುಂತಾದ ಮೂಲಗಳಲ್ಲೇ ಬಳಸಬೇಕಾಗಿಲ್ಲ. ನಿಸರ್ಗ ಸಾರಜನಕ ಸತ್ವದ ಖಣಜ. ನಮ್ಮ ತುರ್ತು ಅವಶ್ಯಕತೆಗಾಗಿ ರಾಸಾಯನಿಕ ವಿಧಾನದ ಮೂಲಕ ಸಾರಜನಕ ಗೊಬ್ಬರವನ್ನು ಉತ್ಪಾದಿಸಿದ್ದು. ಮಣ್ಣಿನಲ್ಲಿ ಸಾಕಷ್ಟು ಸಾರಜನಕದ ಅಂಶ ಇದೆಯಾದರೂ ನಾವು ಯಾಕೆ ಬೇರೆ ಮೂಲದಿಂದ ಸಾರಜನಕವನ್ನು ಬಳಸುತ್ತಿದ್ದೇವೆ ಎಂಬುದು ಎಲ್ಲರ ಭಾವನೆ. ಇದು ಸತ್ಯ. ಕಾರಣ ಇಷ್ಟೇ ಇವು ಬೇರೆ ಬೇರೆ ಕಾರಣಗಳಿಂದ ನಷ್ಟವಾಗುತ್ತದೆ. ಇದನ್ನು ಪೂರ್ಣ ಉಳಿಸಲು ಅಸಾಧ್ಯ. ಪ್ರಯತ್ನ ಪಟ್ಟರೆ ಗರಿಷ್ಟ…

Read more

ಅಧಿಕ ಇಳುವರಿಗೆ ಸಹಾಯಕವಾಗುವ ಸಾವಯವ ಗೊಬ್ಬರಗಳು.

ರಾಸಾಯನಿಕ ಗೊಬ್ಬರಗಳು ಒಮ್ಮೆಗೆ  ಉತ್ತಮ ಫಲಿತಾಂಶ ಕೊಡಬಹುದು. ಆದರೆ ಅದು ಧೀರ್ಘ ಕಾಲದ ತನಕ ಕಷ್ಟ. ಮಣ್ಣಿನ ಫಲವತ್ತತೆಯಿಂದ ಮಾತ್ರ ಧೀರ್ಘಕಾಲಿಕ ಫಲಿತಾಂಶ ಪಡೆಯಲು ಸಾಧ್ಯ. ಧೀರ್ಘಾವಧಿ ಬೆಳೆಗಳಿಗೆ ಮಣ್ಣಿನ ಫಲವತ್ತತೆ ಪ್ರಾಮುಖ್ಯ. ಸಾವಯವ ಅಥವಾ ನೈಸರ್ಗಿಕ ಮೂಲವಸ್ತುಗಳಿಂದ ಮಾತ್ರ ಮಣ್ಣಿನ ಫಲವತ್ತತೆ ವೃದ್ದಿಯಾಗಲು ಸಾಧ್ಯ. ರಾಸಾಯನಿಕ ಗೊಬ್ಬರಗಳು ಎಲ್ಲವೂ ಆಮ್ಲೀಯ ಗುಣದವು. ಇದನ್ನು ಮಣ್ಣಿಗೆ ಹಾಕುವುದರಿಂದ ಮಣ್ಣು ಸ್ವಲ್ಪ ಮಟ್ಟಿಗೆ ಅಜೀರ್ಣಕ್ಕೊಳಗಾಗುತ್ತದೆ. ರಾಸಾಯನಿಕ ಗೊಬ್ಬರಗಳನ್ನು ಬಳಸುವುದರ ಜೊತೆಗೆ  ಸಾವಯವ ವಸ್ತುಗಳನ್ನೂ ಸೇರಿಸುತ್ತಿದ್ದರೆ ಮಣ್ಣು ಆರೋಗ್ಯವಾಗಿರುತ್ತದೆ. ಮಣ್ಣು…

Read more

ರಾಸಾಯನಿಕ ಮುಕ್ತ ಭತ್ತ ಬೇಸಾಯ ಹೀಗೆ.

ಸಮಗ್ರ  ಕೃಷಿ ಪದ್ದತಿ ಎಂದರೆ ಲಭ್ಯವಿರುವ ನಿಯಮಿತ ಸಂಪನ್ಮೂಲಗಳನ್ನು ಬಳಸಿಕೊಂಡು ಅಧಿಕ ಉತ್ಪಾದನೆ  ಪಡೆಯುವ  ಕೃಷಿ ಪದ್ದತಿ. ಇದರಲ್ಲಿ ಒಂದಕ್ಕೊಂದು ಅನುಕೂಲಗಳಿರುತ್ತವೆ. ಸ್ವಾವಲಂಬಿಯಾಗಿ ಬೆಳೆ ತೆಗೆಯಲು ಇದು ಸಹಕಾರಿ. ಭತ್ತದ ಬೆಳೆಗೆ ಯಾವುದೇ ಕೀಟನಾಶಕ- ರೋಗ ನಾಶಕ ಬಳಕೆ ತುಂಬಾ ಕಷ್ಟ ಹಾಗೆಯೇ  ಅಪಾಯಕಾರಿಯೂ ಸಹ. ಇದನ್ನು  ಬಳಸದೆ ಬೆಳೆ ಬೆಳೆಯಲು  ಭತ್ತದ ಜೊತೆಗೆ ಮೀನು, ಕೋಳಿ ಸಾಕಿ.  ಭತ್ತದ ಪೈರಿನ ಅಧಿಕ ಇಳುವರಿಗೆ ಮೇಲ್ ಸ್ಥರದಲ್ಲಿ ಕೋಳಿ  ಗೊಬ್ಬರಕೊಟ್ಟರೆ  ಮೀನು ಬೆಳೆ ಸಂರಕ್ಷಿಸುತ್ತದೆ. ಇದರಿಂದ ಕೀಟ-…

Read more

ಸಾವಯವ ಅಂಶ ಮತ್ತು ಬೆಳೆ ಉತ್ಪಾದಕತೆ.

ಮಣ್ಣು ಕಲ್ಲು ಖನಿಜಗಳ ಶಿತಿಲತ್ವದಿಂದ ಉಂಟಾದುದು. ಮಣ್ಣಿನಲ್ಲಿ ಹುಟ್ಟಿ ಬೆಳೆದ ಸಸ್ಯ, ಪ್ರಾಣಿಗಳ ತ್ಯಾಜ್ಯಗಳು ಮಣ್ಣಿಗೆ ಸೇರಲ್ಪಟ್ಟು ಅದು ಸಾವಯವ ಅಂಶವನ್ನು ಹೆಚ್ಚಿಸುತ್ತಾ ಬಂದಿದೆ. ಸಾವಯವ ಅಂಶ ಇಲ್ಲದ ವಿನಹ ಮಣ್ಣು ಜೀವಂತಿಕೆಯಲ್ಲಿರುವುದಿಲ್ಲ….. ಏನು ಆಗಿದೆ? ಇತ್ತೀಚಿನ ದಿನಗಳಲ್ಲಿ ಅತೀಯಾದ ರಾಸಾಯನಿಕ ಗೊಬ್ಬರ, ಕೀಟನಾಶಕ, ಕಳೆನಾಶಕಗಳ ಬಳಕೆಯಿಂದ ಮಣ್ಣು ತನ್ನ ಫಲವತ್ತತೆಯನ್ನು ಕಳೆದುಕೊಳ್ಳುತ್ತಿದೆ. ಹಾಗೇಯೇ ಮಣ್ಣಿನಲ್ಲಿರುವ ಸೂಕ್ಷ್ಮಾಣು ಜೀವಿಗಳ ಸಂಖ್ಯೆಯು ಕಡಿಮೆಯಾಗುತ್ತಿದೆ. ಅವುಗಳ ಅಲ್ಪ ಸ್ವಲ್ಪ ಪ್ರಮಾಣದಲ್ಲಿ ಸೂಕ್ಷ್ಮಾಣು ಜೀವಿಗಳು ಇದ್ದರೂ ಅವುಗಳ ಚಟುವಟಿಕೆಗೆ ಅನುಕೂಲಕರವಾಗಿಲ್ಲ. ಇದರಿಂದಾಗಿ…

Read more

ಸತ್ವಯುತ ಕಾಂಪೊಸ್ಟು ತಯಾರಿಕೆ ಹೀಗೆ.

ಕಾಂಪೋಸ್ಟು ಅದರಲ್ಲೇನಿದೆ. ಹೊಂಡ ಮಾಡುವುದು ಅದಕ್ಕೆ  ಎಲ್ಲಾ  ತ್ಯಾಜ್ಯಗಳನ್ನು  ಹಾಕುವುದು ಗೋಬರ್ ಗ್ಯಾಸ್ ಸ್ಲರಿಯನ್ನು  ಎರೆಯುವುದು. ಕೆಲವು ತಿಂಗಳಲ್ಲಿ ಕಾಂಪೋಸ್ಟು  ತಯಾರಾಗುತ್ತದೆ. ಇದು ನಿಜವಾಗಿಯೂ ಸೂಕ್ತ  ಕಾಂಪೋಸ್ಟು ತಾಂತ್ರಿಕತೆ ಆಲ್ಲ. ಇದರಲ್ಲಿ ಯಾವ ಪೋಷಕಗಳೂ ಇರುವುದಿಲ್ಲ. ಸಾವಯವ ತ್ಯಾಜ್ಯಗಳು ಹಾಕಿದ ತರಹವೇ ಯಾವುದೇ ರೂಪಾಂತರಗೊಳ್ಳದೆ ಇರುತ್ತವೆ. ಗುಂಡಿಯ  ಒಳಗಡೆ ನೀರು ಹೆಚ್ಚಾಗಿರುತ್ತದೆ. ಇದು ಸೂಕ್ಷ್ಮ ಜೀವಿಗಳನ್ನು ಬದುಕಲು ಬಿಡುವುದಿಲ್ಲ.  ಯಾವುದೇ ಸಾವಯವ ತ್ಯಾಜ್ಯ ಕಾಂಪೋಸ್ಟು ಕ್ರಿಯೆಗೆ ಒಳಪಟ್ಟಾಗ ಅದು ಹುಡಿ ಆಗಬೇಕು. ಗುಂಡಿ ಪದ್ದತಿಯಲ್ಲಿ ಅದು ಆಗುವುದಿಲ್ಲ….

Read more

ಸಾವಯವ ಕೃಷಿ- ಇದು ವ್ಯವಸ್ಥಿತ ರಾಜಕೀಯ.

ರೈತರೇ ನೀವು ಕೃಷಿ ಮಾಡುವವರೇ ಹೊರತು ಪಕ್ಷ ಕಟ್ಟುವವರಲ್ಲ. ಪಕ್ಷ ಕಟ್ಟುವ, ರಾಜಕೀಯ ಮಾಡುವ ಮನೋಸ್ಥಿತಿಯವರು ನಾವಲ್ಲ. ನಾವು ಸಾಧ್ಯವಾದಷ್ಟು ಒಗ್ಗಟ್ಟಾಗುವ ಬಗ್ಗೆ ಶ್ರಮಿಸೋಣ. ನಮಗೆ ಯಾವ ವಿಧಾನದ ಕೃಷಿ ಲಾಭದಾಯಕ ಎಂದೆಣಿಸುತ್ತದೆಯೋ ಅದನ್ನು ಮಾಡೋಣ.. ಕೃಷಿ ಮಾಡುವುದು ನಮ್ಮ ಬದುಕುವ ದಾರಿಗಾಗಿಯೇ ಹೊರತು ಪ್ರಚಾರಕ್ಕಾಗಿ ಅಲ್ಲ ತಾನೇ? ಇಲ್ಲಿ ಇದರ ಪ್ರಸ್ತಾಪ ಯಾಕೆಂದರೆ ಕೃಷಿಕರು ಅವರ ಹೊಟ್ಟೆ ಪಾಡಿಗಾಗಿ  ವೃತ್ತಿ ಮಾಡುವವರು. ಇವರ ಶ್ರಮದಲ್ಲಿ ಸ್ವಾರ್ಥ ಅಲ್ಲದೆ ಸಾಮಾಜಿಕ ಕಳಕಳಿಯೂ ಇದೆ. ಇದರಲ್ಲಿ ಮಧ್ಯಪ್ರವೇಶಕ್ಕೆ ಮೂರನೆಯವರಿಗೆ…

Read more
ಜೀವಾಮೃತ ಮಿಶ್ರಣ

ಜೀವಾಮೃತಕ್ಕೆ ಜೀವ ಕೊಡುವ ವಿಧಾನ.

ಜೀವಾಮೃತ, ಅಮೃತ ಪಾನಿ, ಅಲ್ಲದೆ ಯಾವುದೇ ಸೂಕ್ಷ್ಮಾಣು ಜೀವಿ ಮಿಶ್ರಣಗಳನ್ನು  ತಯಾರಿಸುವ ಸಮಯದಲ್ಲಿ ಬ್ಯಾರಲ್ ಗೆ ಹಾಕಿ ಕಲಕಬೇಕು ಎನ್ನುತ್ತಾರೆ. ಕಲಕುವುದರಿಂದ ಅದರಲ್ಲಿ ಜೀವಾಣುಗಳು ಹೆಚ್ಚಾಗುತ್ತದೆ. ಅವುಗಳಿಗೆ ಜೀವ ಬರುತ್ತದೆ.  ಸೂಕ್ಷ್ಮಾಣು ಜೀವಿಗಳು ಈ ಕ್ರಿಯೆಯಲ್ಲಿ  ಹೆಚ್ಚಿನ ಪ್ರಮಾಣದಲ್ಲಿ ಬೆಳವಣಿಗೆಯಾಗಿ ಸಂಖ್ಯಾಭಿವೃದ್ದಿಯಾಗುತ್ತವೆ. ಇದು ಮತ್ತೆ ಯಾಕೂ ಆಲ್ಲ. ನಾವು ಬಳಕೆ ಮಾಡುವ ಕಚ್ಚಾ ವಸ್ತುಗಳಲ್ಲಿ ಸೂಕ್ಷ್ಮಾಣು ಜೀವಿಗಳು ಇರುತ್ತವೆ. ಈ ಸೂಕ್ಷ್ಮಾಣು ಜೀವಿಗಳು  ಕನಿಷ್ಟ ಪ್ರಮಾಣದಲ್ಲಿದ್ದರೆ ಅದಕ್ಕೆ ಆಹಾರ ಕೊಟ್ಟು ಅದನ್ನು ಕೆವು ದಿನಗಳ ತನಕ  ಪೋಷಣೆ ಮಾಡಿ…

Read more
error: Content is protected !!