ಕೀಟಗಳ ನಿಯಂತ್ರಣಕ್ಕೆ ಹೀಗೆ ಮಾಡಿದರೆ ತುಂಬಾ ಅನುಕೂಲ.

 ಬಲೆ ಬೆಳೆ ಎಂದರೆ ಒಂದು ಬೆಳೆಗೆ ಬರುವ ಕೀಟವನ್ನು ಮತ್ತೊಂದು ಬೆಳೆಯ ಮೂಲಕ ಬಂಧಿಸುವುದು. ಕೀಟಗಳಿಗೆ ಬೇಕಾದಷ್ಟು ಅಹಾರ ಕೊಟ್ಟು ಅವುಗಳನ್ನು ಅಲ್ಲೇ ಬಂಧಿಸುವುದು ಎಲ್ಲದಕ್ಕೂ ಕೀಟ  ನಾಶಕ ಪರಿಹಾರ ಅಲ್ಲ. ಅದು ಸಮಂಜಸ ಪರಿಹಾರವೂ ಅಲ್ಲ. ನಾವು ಕೈಯಿಂದ ಕೊಯ್ಯುವುದು ಸಾಧ್ಯವಿದ್ದರೆ ಅದರಿಂದಲೇ  ಕೊಯಿಲು ಮಾಡಬೇಕು. ನಾವು ಈಗ ಕೊಕ್ಕೆ ಅನಿವಾರ್ಯವಾದಂತೆ  ವರ್ತಿಸುತ್ತೇವೆ. ಹುಳ ಬಿದ್ದಿದೆ ಯಾವ ಕೀಟ ನಾಶಕ ಸಿಂಪಡಿಸಬೇಕು ಎಂದು ಕೇಳುತ್ತೇವೆಯೇ ವಿನಹ ಏನು ಮಾಡಬೇಕು ಎಂದು ಕೇಳುತ್ತಿಲ್ಲ. ತಜ್ಞರ ಬಳಿಗೆ ರೈತರು ಹೋಗುವುದಿಲ್ಲ….

Read more
ಆಮಟೆ ಕಾಯಿ ಒಡೆದದ್ದು

ಅಮಟೆ- ಇದಕ್ಕೆ ಭಾರೀ ಔಷಧೀಯ ಗುಣ ಇದೆ.  

ನಮ್ಮ ಹಿರಿಯರ ಆಹಾರಾಭ್ಯಾಸಗಳಲ್ಲಿ ಬಹಳ  ಶಿಸ್ತು, ಪೌಷ್ಠಿಕತೆ , ಔಷಧೀಯ ಮಹತ್ವ ಇತ್ತು. ಋತುಮಾನ ಆಧಾರಿತ ಆಹಾರವಸ್ತುಗಳನ್ನೇ ಬಳಸುವುದು ಅವರ ಕ್ರಮ. ಇಂತಹ ಆಹಾರಗಳಲ್ಲಿ  ಕೆಸು, ಅಮಟೆ, ಮಾವು, ಕುಡಿ,ಸೊಪ್ಪು ಮುಂತಾದವು ಸೇರಿವೆ. ಹಿರಿಯರು  ಉಚಿತವಾಗಿ   ಲಭ್ಯವಿರುತ್ತಿದ್ದ  ವಸ್ತುಗಳಿಗೇ ಹೆಚ್ಚಿನ ಮಹತ್ವ ನೀಡುತ್ತಿದ್ದರು. ಅದು ಉಚಿತವಾಗಿದ್ದರೂ ಆರೋಗ್ಯಕ್ಕೆ ಉತ್ತಮವಾಗಿತ್ತು. ಈಗ ನಾವು ದುಡ್ಡು ಕೊಟ್ಟು ಖರೀದಿಸುವ ವಸ್ತುಗಳಲ್ಲಿ  ಆರೋಗ್ಯವನ್ನು  ಗಮನಿಸುವುದೇ ಇಲ್ಲ. ಹಿಂದೆ ಮಳೆಗಾಲವೆಂಬ ಕಷ್ಟದ ಸಮಯದಲ್ಲಿ  ಅಡುಗೆಗೆ ಅಗ್ಗದಲ್ಲಿ ದೊರೆಯುವ ಹುಳಿ ಕಾಯಿ ಇದಾಗಿತ್ತು.  ಏನಿದು…

Read more

ಸಾವಯವ ಅಂಶ ಇಲ್ಲದಿದ್ದರೆ ಬೆಳೆ ಬರಲಾರದು.

ಕೃಷಿ ಮಾಡುವಾಗ ರಾಸಾಯನಿಕ ಗೊಬ್ಬರ ಒಂದನ್ನೇ ಮಣ್ಣಿಗೆ ಕೊಡುತ್ತಾ ಇದ್ದರೆ, ನಿಧಾನವಾಗಿ ಮಣ್ಣಿನ ರಚನೆ ಕೆಳಮಟ್ಟಕ್ಕೆ ಇಳಿಯುತ್ತದೆ. ಮಣ್ಣಿನ ರಚನೆ ವ್ಯತ್ಯಾಸವಾದರೆ ರಸಗೊಬ್ಬರಗಳು ಕೆಲಸ ಮಾಡುವುದಿಲ್ಲ. ಯಾವುದೇ ರಸ ಗೊಬ್ಬರಗಳನ್ನು ನೇರವಾಗಿ ಸಸ್ಯಗಳು ಬಳಕೆ ಮಾಡಿಕೊಳ್ಳಲಾರವು. ಮಣ್ಣಿನ ಜೀವಾಣುಗಳ ಸಹಕಾರದಿಂದ ಅವು ಸಸ್ಯಗಳಿಗೆ ಲಭ್ಯವಾಗುತ್ತದೆ. ಮಣ್ಣಿನಲ್ಲಿ ಜೀವಾಣುಗಳು ಇದ್ದರೆ ಅದು ಜೀರ್ಣಕ್ಕೊಳಪಡುತ್ತದೆ. ಫಲವತ್ತತೆ ಕಡಿಮೆಯಾದ ಮಣ್ಣಿನಲ್ಲಿ ಜೀವಾಣುಗಳ ಸಂಖ್ಯೆ ಕಡಿಮೆಯಾಗುತ್ತದೆ. ಆಗ ರಸ ಗೊಬ್ಬರಗಳ ಕ್ಷಮತೆಯೂ ಕಡಿಮೆಯಾಗುತ್ತದೆ. ಆದ ಕಾರಣ ಅಧಿಕ ಇಳುವರಿಗೆ  ಅಗತ್ಯವಿದ್ದರೆ ರಸಗೊಬ್ಬರ ಹಿತ…

Read more
ಸಾವಯವ ತ್ಯಾಜ್ಯಗಳನ್ನು ಮಧ್ಯದಲ್ಲಿ ಹಾಕಬೇಕು.

ಬೆಳೆಗಳಿಗೆ ಸಾವಯವ ಗೊಬ್ಬರ ಹಾಕುವ ವೈಜ್ಞಾನಿಕ ವಿಧಾನ.

ಹಸಿ ಸಾವಯವ ಗೊಬ್ಬರಗಳನ್ನು ಹಾಕಿದ ಸ್ಥಳದಲ್ಲಿ ನೆಲದ ಹುಲ್ಲು ಇತ್ಯಾದಿ ಸತ್ತು ಹೋಗುತ್ತದೆ.  ಕಳಿಯುವ ಕ್ರಿಯೆಯಲ್ಲಿ ಕೆಲವು ಆಮ್ಲಗಳು ಮತ್ತು ಶಾಖ ಬಿಡುಗಡೆಯಾಗಿ ನೆಲಕ್ಕೆ ಅದು ಸ್ವಲ್ಪ ಮಟ್ಟಿಗೆ ಪ್ರಸಾರವಾಗುತ್ತದೆ. ಒಂದು ವೇಳೆ ನೀವು ಹಸಿ ಸಾವಯವ ಗೊಬ್ಬರಗಳನ್ನು ಮರದ – ಸಸಿಯ ಬುಡಕ್ಕೆ ಹಾಕಿದರೆ ಅದರ ಕಾಂಡದ ಭಾಗಕ್ಕೆ ಘಾಸಿ ಉಂಟಾಗುತ್ತದೆ. ಮನುಷ್ಯ ಎಷ್ಟೇ ಉತ್ತಮ ಆಹಾರ ಸೇವನೆ ಮಾಡಿದರೂ ಸಹ, ಅದು ಸರಿಯಾಗಿ ಜೀರ್ಣ ಆಗಬೇಕಿದ್ದರೆ ಅದರ ಜೊತೆಗೆ ತೇವಾಂಶ ( ನೀರು) ಅಗತ್ಯ….

Read more
ಬಳಕೆಗೆ ಸಿದ್ದವಾದ ಸುಡುಮಣ್ಣು – Sudumannu ready to use.

ಸುಡುಮಣ್ಣು – ಇದು ಮಣ್ಣಿನ ಆರೋಗ್ಯ ರಕ್ಷಕ ಡಾಕ್ಟರ್.

ಎಲ್ಲಾ  ತರಹದ ಮಣ್ಣು ಬೆಳೆಗಳಿಗೆ ಸೂಕ್ತವಲ್ಲ. ಕೆಲವು ಮಣ್ಣಿನಲ್ಲಿ ಬೆಳೆಗಳಿಗೆ  ಹಾನಿಕಾರಕ ರೋಗಾಣುಗಳು ಮತ್ತು ಕೀಟದ ಮೊಟ್ಟೆಗಳು ಇರಬಹುದು. ಅಂತಹ ಸಂಶಯ ಇರುವ ಮಣ್ಣನ್ನು ಸ್ವಲ್ಪ ಬಿಸಿ ಪ್ರಕ್ರಿಯೆಗೆ ಒಳಪಡಿಸಿ ಸುಡುಮಣ್ಣಾಗಿ ಪರಿವರ್ತಿಸಿದರೆ,  ಅದು ಪೂರ್ಣ ಸ್ಟೆರಿಲೈಸ್ ಮಾಡಿದ  ಸ್ವಚ್ಚ ಶುದ್ಧ ಮಣ್ಣಾಗುತ್ತದೆ. ಮಣ್ಣನ್ನು ಸ್ವಲ್ಪ ಬಿಸಿ ಮಾಡಿದಾಗ ಅದಕ್ಕೆ ಕರಕಲು ಸಾವಯವ ತ್ಯಾಜ್ಯ ಸೇರಿದಾಗ ಅದು ಸಾವಯವ ಇಂಗಾಲವನ್ನು (Carbon – bio char ) ಹೆಚ್ಚಿಸುವಲ್ಲಿ ಸಹಾಯಕವಾಗುತ್ತದೆ. ಸಾವಯವ ತ್ಯಾಜ್ಯಗಳು ಮಣ್ಣನ್ನು ಜೈವಿಕವಾಗಿ ಶ್ರೀಮಂತಿಕೆಗೆ…

Read more
ಗೋಬರ್ ಗ್ಯಾಸ್ ಸ್ಥಾವರ

ಗೋಬರ್ ಗ್ಯಾಸ್ ಸ್ಲರಿಯಲ್ಲಿ ಸತ್ವ ಇದೆ.

ಸಗಣಿಯನ್ನು ಹಾಗೆಯೇ ಬೆಳೆಗಳಿಗೆ ಹಾಕುವುದಕ್ಕಿಂತ ಅದನ್ನು ದ್ರವೀಕರಿಸಿ ಕೊಡುವುದರಿಂದ ಅದರ ಪೂರ್ಣ ಸತ್ವಗಳು  ಬೆಳೆಗಳಿಗೆ  ದೊರೆಯುತ್ತದೆ. ಅನಿಲ ಉತ್ಪಾದನೆ ಅಗುವಾಗ ಸಗಣಿಯ ಸಾರ ಕಡಿಮೆಯಾಗುತ್ತದೆ ಎಂಬುದು ನಿಜವಲ್ಲ. ಅನಿಲ ಉತ್ಪಾದನೆಗೆ ಬೇಕಾಗುವ ಅಂಶವೇ ಬೇರೆ. ಬೆಳೆಗಳಿಗೆ ಬೇಕಾಗುವುವಂತದ್ದು ಅದರಲ್ಲೇ ಉಳಿಯುತ್ತದೆ.ಪ್ರತೀಯೊಬ್ಬ ಗೋಬರ್ ಗ್ಯಾಸ್ ಸ್ಲರಿ ಬಳಕೆದಾರ ತಿಳಿಯಬೇಕಾದ  ಮಾಹಿತಿ ಇಲ್ಲಿದೆ. ಹಳ್ಳಿಯಲ್ಲಿ ಕೃಷಿಕರ ಮನೆಯಲ್ಲಿ ಬಯೋಗ್ಯಾಸ್ ಅಥವಾ ಗೋಬರ್ ಗ್ಯಾಸ್ ಇದ್ದರೆ ಸಿದ್ದ ಗೊಬ್ಬರ ಇದ್ದಂತೆ. ಒಂದೆರಡು ದನ ಇದ್ದವರೂ ಗೋಬರ್ ಗ್ಯಾಸ್ ಮಾಡಿಕೊಳ್ಳಬಹುದು. ಹೆಚ್ಚು ದನ…

Read more
ಬೂದಿಯ ಮೂಲಕ ಕೀಟ ನಿಯಂತ್ರಣ

ಸಾವಯವ ಕೀಟ –ರೋಗ-ನಿಯಂತ್ರಣ ವಿಧಾನ.

ಸರ್ವ ರೋಗಕ್ಕೆ ಬೂದಿ ಮದ್ದು ಎಂಬುದನ್ನು ಎಲ್ಲರೂ ಕೇಳಿರಬಹುದು. ಬೂದಿ ಎಂದರೆ ಅದು ಮರವನ್ನು ಸುಟ್ಟಾಗ ಸಿಗುವ ವಸ್ತು, ಇದು ಕ್ಷಾರೀಯ. ಇದನ್ನು ಬೆಳೆಗಳ  ಮೇಲೆ ಚೆಲ್ಲಿದಾಗ ಅದು ಒಂದು ಪೊಟ್ಯಾಶಿಯಂ ಸತ್ವದ ಪೋಷಕವಾಗಿಯೂ ,  ಕೀಟ ರೋಗ ನಿಯಂತ್ರಕವಾಗಿಯೂ ಕೆಲಸ ಮಾಡುತ್ತದೆ. ಇದನ್ನು ಬಹುಸ್ತರದ ಸಾವಯವ ಕೀಟ –ರೋಗ-ನಿಯಂತ್ರ ಕ ಎಂಬುದಾಗಿ ಹಿರಿಯರು ಹೇಳುತ್ತಾ ಬಂದಿದ್ದಾರೆ. ದುರದೃಷ್ಟವೆಂದರೆ ಈಗ  ಅಡುಗೆ ಒಲೆಗೆ ಗ್ಯಾಸ್  ಬಂದಿದೆ. ಬಿಸಿ ನೀರ ಸ್ನಾನಕ್ಕೆ ಸೋಲಾರ್ ಬಂದಿದೆ. ಕಟ್ಟಿಗೆ ಸುಟ್ಟ ಬೂದಿ…

Read more
ಹೃದಯ ಶ್ರೀಮಂತಿಕೆಯ ಕೃಷಿಕರು.

ಕೃಷಿಕರು ಹಣದಲ್ಲಿ ಶ್ರೀಮಂತರಲ್ಲದಿದ್ದರೂ ಹೃದಯ ಶ್ರೀಮಂತರು.

ನಾವು ಕೃಷಿಕರು ಬಡವರು. ನಮಗೆ ಏನೂ ಇಲ್ಲ ಎಂದು ಯಾವತ್ತೂ ಹೇಳಬೇಡಿ. ಕೃಷಿರಾದವರೇ ಸಮಾಜದಲ್ಲಿ ತೃಪಿಯ ಜೀವನ ನಡೆಸು ಹೃದಯ ಶ್ರೀಮಂತರು. ಬಡತನ, ಶ್ರೀಮಂತಿಕೆ ಮುಖ್ಯವಲ್ಲ. ಬಡವನಾದವನೇ ಮುಂದೆ ಶ್ರೀಮಂತನಾಗುವುದು. ಸಿರಿವಂತನಾದವನೇ ನಂತರ ಬಡವನಾಗುವುದು. ಇದೊಂದು ಚಕ್ರ. ಕೃಷಿಕರ ಜೀವನ ಕ್ರಮ ಎಂಬುದು ಸಮಾಜದಲ್ಲಿ ಯಾರೂ ಗಳಿಸದ ಸುಖೀ ಬದುಕನ್ನು ಅನುಭವಸಲಿಕ್ಕಾಗಿಯೇ ಇರುವುದು. ಸ್ವಾವಲಂಭಿ ಬದುಕು ಎಂಬುದು ಇದ್ದರೆ ಅದು ಕೃಷಿ ವೃತ್ತಿಯಲ್ಲಿ ಮಾತ್ರ. ಇಲ್ಲಿ ನಮಗೆ ನಾವೇ ಮಾಲಕರು. ಹೊಟ್ಟೆಗೆ ತಿನ್ನುವುದಕ್ಕೇನೂ ಕಡಿಮೆ ಇಲ್ಲ. ತಿಂದು…

Read more
ಬಾಟಲಿ, ಕ್ಯಾನುಗಳಲ್ಲಿ ಜೈವಿಕ ಗೊಬ್ಬರ

ಬಾಟಲಿ, ಕ್ಯಾನುಗಳ ಜೈವಿಕ ಗೊಬ್ಬರಗಳು ಮತ್ತು ಅದರ ಉಪಯುಕ್ತತೆ.

ಇತ್ತೀಚೆಗೆ ಸುಮಾರು 10 ವರ್ಷಗಳಾಗಿರಬಹುದು. ಬೇರೆ ಬೇರೆ ತಯಾರಕರು ಲೀಟರು ಬಾಟಲಿಗಳಲ್ಲಿ, 5 ಲೀ. ಕ್ಯಾನುಗಳಲ್ಲಿ ಜೈವಿಕ ಗೊಬ್ಬರ ತುಂಬಿಸಿ ಬೆಳೆ ಪೋಷಕ ಎಂಬ ಹೆಸರಿನಲ್ಲಿ ಮಾರಾಟ ಮಾಡಲಾರಭಿಸಿದ್ದಾರೆ. ಹಳ್ಳಿ ಹಳ್ಳಿಗಳಲ್ಲಿ ಈ ವ್ಯವಹಾರ ಭಾರೀ ಚುರುಕಾಗಿದೆ.  ಜನ ಇಷ್ಟೊಂದು ಕಡಿಮೆ ಪ್ರಮಾಣದಲ್ಲಿ ಗೊಬ್ಬರ ಹಾಕಿ ಬೆಳೆ ಬರುವುದೇ ಆದರೆ ಯಾಕೆ ಬಳಸಿ ನೊಡಬಾರದು ಎಂದು ಎಲ್ಲರೂ ಒಂದೊಂದು ಪ್ರಯತ್ನ ಮಾಡುತ್ತಲೇ ಇದ್ದಾರೆ.  ಹಳೆ ಗಿರಾಕಿ ಹೋದಂತೆ ಹೊಸ ಹೊಸ ಗಿರಾಕಿಗಳು ಸಿಗುತ್ತಾ ಇದ್ದಾರೆ. ಬಾಟಲಿ ಗೊಬ್ಬರಗಳ…

Read more
ತಾಜಾ ಸೊಪ್ಪು ತರಕಾರಿ ಮಾರುವವರು

ನಮ್ಮ ಕಾಲಿಗೆ ನಾವೇ ಮೊಳೆ ಹೊಡೆದುಕೊಳ್ಳುವುದು ಹೀಗೆ.

ಯಾವುದೇ ಕೆಲಸ ಮಾಡಬೇಕಾರೂ ಅದು ನಮ್ಮ ಮೈಮೇಲೆ ಬರಬಹುದೇ ಎಂದು ಒಂದಲ್ಲ ಹತ್ತಾರು ಸಲ ಯೋಚಿಸಬೇಕು. ನಾವು ಕಾಲಹರಣಕ್ಕಾಗಿ ಮಾಡುವ ಕೆಲವು ಕೆಲಸಗಳು ನಮ್ಮ ವೃತ್ತಿಗೇ ತೊಂದರೆ ಕೊಡುವಂತಾಗಬಾರದು.ಕೃಷಿಕರು ಬೆಳೆಯುವ ಉತ್ಪನ್ನಗಳಿಗೆ ಅಪಪ್ರಚಾರ ಮಾಡಿ ನಮ್ಮ ಕಾಲಿಗೆ ನಾವೇ ಮೊಳೆ ಹೊಡೆದುಕೊಳ್ಳಬಾರದು. ಕಳೆದ ಎರಡು ದಿನಗಳಿಂದ ನಾವೆಲ್ಲಾ ಚಾಚೂ ತಪ್ಪದೆ ವೀಕ್ಷಿಸುವ ವಾಟ್ಸ್ ಅಪ್, ಫ಼್ಹೇಸ್ ಬುಕ್ ಮುಂತಾದವುಗಳಲ್ಲಿ ಹರಿದಾಡುವ ಒಂದು ವೀಡಿಯೋ ಬಗ್ಗೆ ಇಲ್ಲಿ ಹೇಳಲಿಚ್ಚಿಸುತ್ತೆವೆ. ಇದು ಸೊಪ್ಪು ತರಕಾರಿಗಳನ್ನು ಬಾಡದಂತೆ ಹಚ್ಚ ಹಸುರಾಗಿ ಉಳಿಸಲು…

Read more
error: Content is protected !!